ನಾಯಕರ ಒತ್ತಡ ತಂತ್ರ : ಕಾಂಗ್ರೆಸಿಗೆ ಗೆಲುವು ಕಷ್ಟ

Published : Jul 17, 2018, 04:59 PM IST
ನಾಯಕರ ಒತ್ತಡ ತಂತ್ರ : ಕಾಂಗ್ರೆಸಿಗೆ ಗೆಲುವು ಕಷ್ಟ

ಸಾರಾಂಶ

ರಾಜಸ್ಥಾನದಲ್ಲಿ ಮೈತ್ರಿ ಮಾಡಿಕೊಂಡರೆ ಮಾತ್ರ ಮಧ್ಯಪ್ರದೇಶದಲ್ಲಿ ಹೊಂದಾಣಿಕೆ ಎನ್ನುತ್ತಿರುವ ಮಾಯಾವತಿ ಮಾಯಾವತಿಯ ಬೆಂಬಲವಿಲ್ಲದಿದ್ದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸಿಗೆ ಕಷ್ಟ

ರಾಜಸ್ಥಾನದಲ್ಲಿ ನಮ್ಮ ಜೊತೆ ಮೈತ್ರಿ ಮಾಡಿಕೊಂಡರೆ ಮಾತ್ರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸೀಟು ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ರಾಹುಲ್ ಗಾಂಧಿಗೆ ಮಾಯಾವತಿ ಸ್ಪಷ್ಟವಾಗಿ ಹೇಳಿದ್ದು, ಕಾಂಗ್ರೆಸ್ ದ್ವಂದ್ವದಲ್ಲಿದೆ. ಮಧ್ಯಪ್ರದೇಶದಲ್ಲಿ ಶಿವರಾಜ ಸಿಂಗ್ ಚೌಹಾಣ್‌ರನ್ನು ಸೋಲಿಸಬೇಕಾದರೆ ಮಾಯಾವತಿ ಯ ಸಹಾಯ ಬೇಕೇ ಬೇಕು.

ಹೀಗಾಗಿ ಇಲ್ಲಿ ಕಾಂಗ್ರೆಸ್ ಮಾಯಾವತಿ ಜೊತೆಗೆ ಹೋಗಲು ತಯಾರಿದೆ. ಆದರೆ ರಾಜಸ್ಥಾನದಲ್ಲಿ ವಸುಂಧರಾ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದು, ಅಲ್ಲಿ ಕಾಂಗ್ರೆಸ್‌ಗೆ ಮಾಯಾವತಿ ಜೊತೆ ಹೋಗುವ ಅಗತ್ಯ ಕಾಣುತ್ತಿಲ್ಲ. ಆದರೆ ಸಿಕ್ಕಿರುವ ಅವಕಾಶ ಉಪಯೋಗಿಸುತ್ತಿರುವ ಮಾಯಾವತಿ, ತನ್ನ ವೋಟ್ ಕಟವಾ ಇಮೇಜ್ ಬಳಸಿಕೊಂಡು ಕಾಂಗ್ರೆಸ್ ಮೇಲೆ ಎಲ್ಲ ಕಡೆ ಮೈತ್ರಿ ಮಾಡಿಕೊಳ್ಳುವಂತೆ ಒತ್ತಡ ಹಾಕುತ್ತಿದ್ದಾರೆ.

[ಕನ್ನಡಪ್ರಭ - ಪ್ರಶಾಂತ್ ನಾತೂ ಅವರ ಅಂಕಣದ ಆಯ್ದ ಭಾಗ ]

ಈಪೇಪರ್ ನಲ್ಲೂ ಸುದ್ದಿ ಓದಿ : ನಾಯಕರ ಒತ್ತಡ ತಂತ್ರ : ಕಾಂಗ್ರೆಸಿಗೆ ಗೆಲುವು ಕಷ್ಟ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಂಪನಿ ಮಾರಾಟವಾದರೆ ನಿಯತ್ತಾಗಿ ದುಡಿದ ಉದ್ಯೋಗಿಗಳ ಪಾಡೇನು? ಮಾದರಿಯಾದ ಬಿಗ್ ಬಾಸ್
MNREGA Row: ಕಾಂಗ್ರೆಸ್‌ಗೆ ಯಾವುದೇ ನೀತಿ ಇಲ್ಲ, ಗದ್ದಲ ಕೇವಲ ರಾಜಕೀಯ: ಶಿವರಾಜ್ ಸಿಂಗ್ ಚೌಹಾಣ್ ಕಿಡಿ