ಬಿಎಸ್'ವೈ ಬದಲಾದರೆ ಬಿಜೆಪಿಗೆ ಯಾರು ?

Published : Jul 31, 2018, 04:39 PM IST
ಬಿಎಸ್'ವೈ ಬದಲಾದರೆ ಬಿಜೆಪಿಗೆ ಯಾರು ?

ಸಾರಾಂಶ

ಬಿಜೆಪಿಗೆ ನೂತನ ಸಾರಥಿಯಾಗಿ ಒಕ್ಕಲಿಗರ ನೇಮಕ ಸಾಧ್ಯತೆ ? ಬಿಎಸ್ವೈಗೆ ದಲಿತ ಎಡ ವರ್ಗದವರ ಮೇಲೆ ಒಲವು

ರಾಜ್ಯಾಧ್ಯಕ್ಷ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಿಸುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಿಲ್ಲ. ಆಗಲೇ ಅವರ ಜಾಗಕ್ಕೆ ಈ ಬಾರಿ ಒಕ್ಕಲಿಗರನ್ನು ನೇಮಿಸಬಹುದು ಎಂಬ ಲೆಕ್ಕಾಚಾರದೊಂದಿಗೆ ಆರ್ ಅಶೋಕ್ ಮತ್ತು ಸಿ ಟಿ ರವಿ ಮಧ್ಯೆ ಪ್ರಬಲ ಪೈಪೋಟಿ ಶುರುವಾಗಿದೆ. ಸಂತೋಷ್ ಜಿ ಬೆಂಬಲದ ಕಾರಣದಿಂದ ಮಂಗಳೂರು ಸಂಸದ ನಳಿನ್ ಕುಮಾರ ಕಟೀಲು ಕೂಡ ಸ್ಪರ್ಧೆಯಲ್ಲಿದ್ದಾರೆ.

ಒಂದು ವೇಳೆ ಅನಿವಾರ್ಯವಾಗಿ ತಾನು ಕೆಳಗೆ ಇಳಿಯಲೇಬೇಕಾದಲ್ಲಿ ಯಡಿಯೂರಪ್ಪನವರು ದಲಿತ ಬೋವಿ ಸಮುದಾಯಕ್ಕೆ ಸೇರಿದ ಅರವಿಂದ ಲಿಂಬಾವಳಿ ಹೆಸರು ಹೇಳಬಹುದು. ಆದರೆ ಕಪ್ಪು ಕುದುರೆಯಾಗಿ ಕೊನೆಯ ಗಳಿಗೆಯಲ್ಲಿ ದಲಿತ ಎಡ ವರ್ಗಕ್ಕೆ ಸೇರಿರುವ ಗೋವಿಂದ ಕಾರಜೋಳ ಹೆಸರು ಪ್ರತ್ಯಕ್ಷವಾದರೂ ಆಶ್ಚರ್ಯವಿಲ್ಲ. ಇದಕ್ಕಾಗಿ ಸಿ ಟಿ ರವಿ ಮತ್ತು ಗೋವಿಂದ ಕಾರಜೋಳ ಈಗಾಗಲೇ ಒಂದೆರಡು ಸುತ್ತು ದಿಲ್ಲಿ ರೌಂಡ್ಸ್ ಮುಗಿಸಿದ್ದಾರೆಂಬ ಮಾತುಗಳೂ ಇವೆ.

[ಪ್ರಶಾಂತ್ ನಾತು ಅವರ ಇಂಡಿಯಾ ಗೇಟ್ ಅಂಕಣದ ಆಯ್ದ ಭಾಗ]

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ಎಸ್‌ಟಿಡಿ ಟೆಸ್ಟ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದ ಗರ್ಲ್‌ಫ್ರೆಂಡ್‌ ಕತೆ ಮುಗಿಸಿದ ವಿದ್ಯಾರ್ಥಿ