ಬಿಎಸ್ಪಿ ಮುಖಂಡನ ಹತ್ಯೆಗೆ ಸುಪಾರಿ ಕೊಟ್ಟ ಸ್ವಯಂಘೋಷಿತ ದೇವಮಾನವ ಬಾಬಾ ಪ್ರತಿಭಾನಂದ ಬಂಧನ

Published : Sep 16, 2017, 04:19 PM ISTUpdated : Apr 11, 2018, 12:43 PM IST
ಬಿಎಸ್ಪಿ ಮುಖಂಡನ ಹತ್ಯೆಗೆ ಸುಪಾರಿ ಕೊಟ್ಟ ಸ್ವಯಂಘೋಷಿತ ದೇವಮಾನವ ಬಾಬಾ ಪ್ರತಿಭಾನಂದ ಬಂಧನ

ಸಾರಾಂಶ

ಬಹುಜನ ಸಮಾಜವಾದಿ ಪಕ್ಷದ ಮುಖಂಡ ಹಾಗೂ ಉದ್ಯಮಿ ದೀಪಕ್ ಬಾರದ್ವಾಜ್’ರವರ ಹತ್ಯೆಯಲ್ಲಿ ಭಾಗಿಯಾಗಿರುವ ಸ್ವಯಂಘೋಷಿತ ದೇವಮಾನವ ಬಾಬಾ ಪ್ರತಿಭಾನಂದರವರನ್ನು ಗಾಜಿಯಾಬಾದ್ ಪೊಲೀಸರು ಇಂದು ಬಂಧಿಸಿದ್ದಾರೆ.

ನವದೆಹಲಿ (ಸೆ.16): ಬಹುಜನ ಸಮಾಜವಾದಿ ಪಕ್ಷದ ಮುಖಂಡ ಹಾಗೂ ಉದ್ಯಮಿ ದೀಪಕ್ ಬಾರದ್ವಾಜ್’ರವರ ಹತ್ಯೆಯಲ್ಲಿ ಭಾಗಿಯಾಗಿರುವ ಸ್ವಯಂಘೋಷಿತ ದೇವಮಾನವ ಬಾಬಾ ಪ್ರತಿಭಾನಂದರವರನ್ನು ಗಾಜಿಯಾಬಾದ್ ಪೊಲೀಸರು ಇಂದು ಬಂಧಿಸಿದ್ದಾರೆ.

2009 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ದೀಪಕ್ ಭಾರದ್ವಾಜ್ ಶ್ರೀಮಂತ ಸ್ಪರ್ಧಿಯಾಗಿದ್ದರು. ಆ ಸಂದರ್ಭದಲ್ಲಿ ಅವರ ಆಸ್ತಿಯ ಮೌಲ್ಯ ಸುಮಾರು 600 ಕೋಟಿ. ಇವರ ಹತ್ಯೆಗೆ ಬಾಬಾ ಪ್ರತಿಭಾನಂದ ಸಂಚು ರೂಪಿಸಿ ಹಂತಕರಿಗೆ ಸುಪಾರಿ ಕೊಟ್ಟಿದ್ದರು ಎಂಬುದು ತನಿಖೆಯಲ್ಲಿ ಬಹಿರಂಗಗೊಂಡಿದೆ.

ದೀಪಕ್ ಭಾರದ್ವಾಜ್ ಹತ್ಯೆಯ ನಂತರ ಬಾಬಾ ಪ್ರತಿಬಾನಂದ ತಲೆಮರೆಸಿಕೊಂಡಿದ್ದರು. ಗಾಜಿಯಬಾದ್ ರೈಲ್ವೇ ಸ್ಟೇಷನ್ ಬಳಿ ಬಾಬಾ ಅಡ್ಡಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ನಾವು ಕೆಲವು ತಂಡಗಳನ್ನು ಮಾಡಿ ಅವರನ್ನು ಬಂದಿಸಿದೆವು. ಅವರಿಂದ ಪಿಸ್ತೂಲನ್ನು ವಶಪಡಿಸಿಕೊಂಡಿದ್ದೇವೆ ಎಂದು ಎಸ್ಪಿ ಅಶೋಕ್ ತೋಮರ್ ಹೇಳಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ರೆಸಾರ್ಟ್‌ನಲ್ಲಿ ಅಕ್ರಮ ವಿದೇಶಿಯರಿಗೆ ಆಶ್ರಯ; ಪ್ರಕರಣ ದಾಖಲು!
VB–G RAM G Bill 2025: ಗಾಂಧೀಜಿ, ಹೋರಾಟಗಾರರಿಗೆ ಅಪಮಾನ: ಕೇಂದ್ರದ ವಿರುದ್ಧ ಉಗ್ರಪ್ಪ ಕೆಂಡಾಮಂಡಲ!