ಸೆಲ್ಪಿ ವಿಡಿಯೋ ಮಾಡಿ ರೈಲಿಗೆ ತಲೆಕೊಟ್ಟ ಯುವಕ

Published : Dec 29, 2017, 09:39 PM ISTUpdated : Apr 11, 2018, 01:10 PM IST
ಸೆಲ್ಪಿ ವಿಡಿಯೋ ಮಾಡಿ ರೈಲಿಗೆ ತಲೆಕೊಟ್ಟ ಯುವಕ

ಸಾರಾಂಶ

ಜೇವರ್ಗಿ ತಾಲೂಕಿನ ಸುಂಬಡ ನಿವಾಸಿ ಸುಧಾಕರ(26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಾತ. ಸೆಲ್ಪಿ ವಿಡಿಯೋದಲ್ಲಿ ಮಲ್ಲಪ್ಪ ಮುರುಳಿ, ಬಾಗವ್ವ ಮುರುಳಿ, ಭೀಮಾಬಾಯ್, ಮಾದೇವಿ ಎನ್ನುವವರೇ ತನ್ನ ಸಾವಿಗೆ ನೇರ ಕಾರಣ ಎಂದು ಹೇಳಿಕೊಂಡಿದ್ದಾನೆ. ಸಾವಿಗೆ ಜೈ ಕರ್ನಾಟಕ ರಕ್ಷಣಾ ವೇದಿಕೆಯವರು ನ್ಯಾಯ ಒದಗಿಸಬೇಕೆಂದು ಕೇಳಿಕೊಂಡಿದ್ದಾನೆ.

ಕಲಬುರಗಿ(ಡಿ.29): ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಯುವಕನೋರ್ವ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಜೇವರ್ಗಿ ತಾಲೂಕಿನ ಸುಂಬಡ ನಿವಾಸಿ ಸುಧಾಕರ(26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಾತ. ಸೆಲ್ಪಿ ವಿಡಿಯೋದಲ್ಲಿ ಮಲ್ಲಪ್ಪ ಮುರುಳಿ, ಬಾಗವ್ವ ಮುರುಳಿ, ಭೀಮಾಬಾಯ್, ಮಾದೇವಿ ಎನ್ನುವವರೇ ತನ್ನ ಸಾವಿಗೆ ನೇರ ಕಾರಣ ಎಂದು ಹೇಳಿಕೊಂಡಿದ್ದಾನೆ. ಸಾವಿಗೆ ಜೈ ಕರ್ನಾಟಕ ರಕ್ಷಣಾ ವೇದಿಕೆಯವರು ನ್ಯಾಯ ಒದಗಿಸಬೇಕೆಂದು ಕೇಳಿಕೊಂಡಿದ್ದಾನೆ. ಆ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ಮೂರು ದಿನಗಳ ಹಿಂದೆ ಸುಧಾಕರ ಪತ್ನಿ ರೇಖಾ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಅವರನ್ನು ಭೇಟಿಯಾಗಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೆಲ್ಫಿಯಲ್ಲಿ ಹೇಳಿರುವ ನಾಲ್ವರು ಹೆಂಡತಿ ಸಂಬಂಧಿಗಳು ಎಂದು ಹೇಳಲಾಗಿದ್ದು, ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3500 ಕಿ.ಮೀ ಸಾಗಬಲ್ಲ ಕೆ - 4ಬ್ಯಾಲಿಸ್ಟಿಕ್‌ ಕ್ಷಿಪಣಿ ಯಶಸ್ವಿ
₹1.1 ಕೋಟಿ ಇನಾಮು ಇದ್ದ ಟಾಪ್ ನಕ್ಸಲ್‌ ಹತ್ಯೆ