
ಮುಂಬೈ: ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದ ಶಿವಸೇನೆಯು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಹಳೆಯ ಮೈತ್ರಿಯನ್ನು ತೊರೆಯುವುದಾಗಿ ಹೇಳಿದೆ.
ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಈ ಬಗ್ಗೆ ಪ್ರಸ್ತಾಪವನ್ನು ಮುಂದಿಟ್ಟರು. ಚರ್ಚೆಯ ಬಳಿಕ ಪಕ್ಷದ ಕಾರ್ಯಕಾರಿಣಿಯು ಸರ್ವಾನುಮತದಿಂದ ಅದನ್ನು ಅನುಮೋದಿಸಿದೆ.
ಕಳೆದ ಮೂರು ವರ್ಷಗಳಿಂದ ಬಿಜೆಪಿಯು ಶಿವಸೇನೆಯ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡುತ್ತಿದೆ. ಆದುದರಿಂದ 2019ರ ಲೋಕಸಭಾ ಚುನಾವಣೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯನ್ನು ಏಕಾಂಗಿಯಾಗಿಯೇ ಎದುರಿಸಬೇಕೆಂದು ಪ್ರಸ್ತಾಪಿಸಿದ್ದೇನೆ, ಎಂದು ರಾವತ್ ಈ ಸಂದರ್ಭದಲ್ಲಿ ಹೇಳಿದ್ದಾರೆ.
48 ಲೋಕಸಭಾ ಸ್ಥಾನಗಳ ಪೈಕಿ ಶಿವಸೇನೆಯು ಕನಿಷ್ಠ 25, ಹಾಗೂ 125 (288ರ ಪೈಕಿ) ವಿಧಾನಸಭಾ ಸ್ಥಾನಗಳನ್ನು ಗೆಲ್ಲುವುದು ಎಂದು ರಾವತ್ ಹೇಳಿದ್ದಾರೆ.
ಹಿಂದುತ್ವಕ್ಕಾಗಿ ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಆದರೆ ಬಿಜೆಪಿಯು ಅಧಿಕಾರವನ್ನು ಬಳಸಿ ಪಕ್ಷದ ಸ್ಥೈರ್ಯವನ್ನು ಕುಗ್ಗಿಸುವ ಕೆಲಸವನ್ನು ಕಳೆದ 3 ವರ್ಷಗಳಿಂದ ಮಾಡುತ್ತಿದೆ, ಎಂದು ರಾವತ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.