
ನವದೆಹಲಿ: ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವಿದ್ಯಾರ್ಥಿಗಳೊಂದಿಗೆ ನಡೆಸಿದ್ದ ‘ಪರೀಕ್ಷಾ ಪರ್ ಚರ್ಚಾ’ ಸಂವಾದ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ವೀಕ್ಷಿಸಿದ್ದ ಬಗ್ಗೆ ದಾಖಲೆ ನೀಡಿ ಎಂದು ಶಾಲೆಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದೆ.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಶಾಲೆಯಲ್ಲಿ ವೀಕ್ಷಿಸಿದ್ದಾರೆ ಎಂಬುದಕ್ಕೆ ವಿಡಿಯೋ ಫುಟೇಜ್ ಅಥವಾ ಫೋಟೊಗಳನ್ನು ಸಾಕ್ಷಿಯಾಗಿ ಸಲ್ಲಿಸಲು ರಾಷ್ಟ್ರಾದ್ಯಂತ ಎಲ್ಲ ಶಾಲೆಗಳಿಗೆ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿ ಸಿದೆ ಎನ್ನಲಾಗಿದೆ.
ಆದರೆ, ಇಂಥ ಯಾವುದೇ ಸುತ್ತೋಲೆ ಯನ್ನು ಕೇಂದ್ರ ಸರ್ಕಾರ ಅಥವಾ ಇಲಾಖೆ ಹೊರಡಿ ಸಿಲ್ಲ. ಎಂದು ಮಾನವ ಸಂಪನ್ಮೂಲ ಇಲಾಖೆ ಸ್ಪಷ್ಟನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.