ಬೆಂಗಳೂರಿನಲ್ಲಿರುವ ನುಸುಳುಕೋರರನ್ನು ವಾಪಸ್ ಕಳಿಸಿ : ತೇಜಸ್ವಿ ಸೂರ್ಯ

Published : Jul 27, 2019, 07:56 AM IST
ಬೆಂಗಳೂರಿನಲ್ಲಿರುವ ನುಸುಳುಕೋರರನ್ನು ವಾಪಸ್ ಕಳಿಸಿ : ತೇಜಸ್ವಿ ಸೂರ್ಯ

ಸಾರಾಂಶ

ಬಾಂಗ್ಲಾ ದೇಶದಿಂದ ಬಂದು ಅಕ್ರಮವಾಗಿ ನೆಲೆಸಿದವರನ್ನು ಇಲ್ಲಿಂದ ವಾಪಸ್ ಕಳಿಸಬೇಕು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಬೆಂಗಳೂರು [ಜು27]: ಬೆಂಗಳೂರಿನಲ್ಲಿರುವ ಅಕ್ರಮ ವಾಗಿ ನೆಲೆಸಿರುವ ಬಾಂಗ್ಲಾ ನುಸುಳಿಕೋರರನ್ನು ಪತ್ತೆ ಹಚ್ಚಿ ವಾಪಸ್ ಕಳಿಸಿದರೆ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶಗಳು ದೊರೆಯಲಿವೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು. ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಆಕ್ಟ್ ಇಂಡಿಯಾ ಫೌಂಡೇಷನ್ ಶುಕ್ರವಾರ ಸೌತ್ಎಂಡ್‌ನಿಂದ ಜಯನಗರ ಶಾಪಿಂಗ್ಕಾಂಪ್ಲೆಕ್ಸ್‌ವರೆಗೂ ಹಮ್ಮಿಕೊಂಡಿದ್ದ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಕ್ರಮ ನುಸುಳಿಕೋರರನ್ನು ಪತ್ತೆ ಹಚ್ಚಿದರೆ ದೇಶದ ಹಿತದೃಷ್ಟಿಯಿಂದಲೂ ರಕ್ಷಣೆ ದೊರೆಯಲಿದೆ ಎಂದು ಹೇಳಿದರು.

ನಿವೃತ್ತ ಏರ್ ಮಾರ್ಷಲ್ ಬಿ.ಕೆ.ಮುರಳಿ ಮಾತನಾಡಿ, ಕಾರ್ಗಿಲ್ ಯುದ್ಧದ ಸನ್ನಿವೇಶ ಗಳು, ಯುದ್ಧಭೂಮಿ ಹೋರಾಟಗಳು, ಸೈನಿಕರ ಶೌರ್ಯ-ಸಾಹಸಗಳನ್ನು ಎಳೆಎಳೆಯಾಗಿ ವಿವರಿಸಿದರು. ಕಾರ್ಗಿಲ್ ಯುದ್ಧ ನಡೆದ 20 ವರ್ಷಗಳಾಗಿವೆ. ಪ್ರಾಣವನ್ನು ಪಣಕ್ಕಿಟ್ಟು ಸೈನಿಕರು ಹೋರಾಡಿ ದ್ದರಿಂದಲೇ ಗೆಲುವು ಸಾಧ್ಯವಾಯಿತು ಎಂದು ತಿಳಿಸಿದರು.

ಸೌತ್‌ಎಂಡ್‌ನಿಂದ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ವರೆಗೂ ಹಮ್ಮಿಕೊಂಡಿದ್ದ ಜಾಥಾ ದಲ್ಲಿ ನೂರಾರು ನಾಗರಿಕರು ಪಾಲ್ಗೊಂಡಿದ್ದವು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್, ಹಾಸನದ ಹುತಾತ್ಮ ಯೋಧ ನಾಗೇಶ್ ಪತ್ನಿ ಆಶಾ ಹಾಗೂ ಪಾಲಿಕೆ ಸದಸ್ಯರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು
ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!