
ನವದೆಹಲಿ[ಜೂ.24]: ಏರ್ ಇಂಡಿಯಾದ ಹಿರಿಯ ಪೈಲಟ್ ಒಬ್ಬರು, ಆಸ್ಪ್ರೇಲಿಯಾದ ವಿಮಾನ ನಿಲ್ದಾಣದಲ್ಲಿ ಪರ್ಸ್ ಕದ್ದು ಗಂಭೀರ ಆರೋಪಕ್ಕೆ ಸಿಕ್ಕಿಹಾಕಿಕೊಂಡಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಏರ್ ಇಂಡಿಯಾ, ಕಳ್ಳತನದ ಆರೋಪಕ್ಕೆ ಗುರಿಯಾಗಿರುವ ಪೈಲಟ್ ಮತ್ತು ಪ್ರಾಂತೀಯ ನಿರ್ದೇಶಕರೂ ಆಗಿರುವ ರೋಹಿತ್ ಭಾಸಿನ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದೆ. ಜೊತೆಗೆ ಪ್ರಕರಣ ಕುರಿತು ತನಿಖೆಗೂ ಆದೇಶಿಸಿದೆ.
2019ರ ಜೂನ್ 22ರಂದು ಭಾಸಿನ್ ಅವರು ಸಿಡ್ನಿ ವಿಮಾನ ನಿಲ್ದಾಣದಲ್ಲಿನ ಸುಂಕರಹಿತ ಮಳಿಗೆಯೊಂದರಲ್ಲಿ ಪರ್ಸ್ ಕದ್ದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣವೇ ಅವರನ್ನು ಭಾರತಕ್ಕೆ ಮರಳುವ ವಿಮಾನದ ಪೈಲಟ್ ಕರ್ತವ್ಯದಿಂದಲೂ ವಿಮುಕ್ತಗೊಳಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.