
ಅಂಕೋಲ(ಮಾ.03): ರಾಜ್ಯ ಸರ್ಕಾರವನ್ನು ಸದಾ ಪೇಚಿಗೆ ಸಿಲುಕಿಸುವ ಕೇಂದ್ರ ಸಚಿವ ಅನಂತ್'ಕುಮಾರ್ ಇಂದು ತಾವೇ ಒರ್ವ ವಯೋವೃದ್ಧೆಯದುರು ಪೇಚಿಕೆ ಸಿಲುಕಿಸಿದ ಪ್ರಸಂಗ ನಡೆಯಿತು.
ಅಂಕೋಲದಲ್ಲಿ ಜನಸುರಕ್ಷಾ ಯಾತ್ರೆಯ ಕಾರ್ಯಕ್ರಮದಲ್ಲಿ ಸಚಿವರು ರಾಜ್ಯ ಸರ್ಕಾರವನ್ನು ಟೀಕಿಸಿ ಮಾತನಾಡುತ್ತಿದ್ದರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣ ಹಾಗೂ ಈಗಿರುವ ಕಾಂಗ್ರೆಸ್ ಸರ್ಕಾರ ದಲ್ಲಿ ಆದ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣ ಕುರಿತು ಅಂಕಿ ಅಂಶಗಳನ್ನು ನೀಡಿ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದರು.
ಈ ಸಂದರ್ಭದಲ್ಲಿ ಅಂಕೋಲದ ಹಟ್ಟೀಕೇರಿ ನಿವಾಸಿ ಸುಶೀಲಾ ನಾಯ್ಕ ಎಂಬ ವಯೋವೃದ್ಧೆಯೊಬ್ಬರು ಏಕಾಏಕಿಯಾಗಿ ಎದ್ದು ನಿಂತು, ನೀವು ಕೇಳಿದ ಪ್ರಶ್ನೆಗೆ ನಾನು ಉತ್ತರಿಸುತ್ತೇನೆ. ನಾನು ಕೇಳಿದ ಪ್ರಶ್ನೆಗೆ ನೀವು ಉತ್ತರಿಸಿ'ಎಂದು ಸಚಿವರನ್ನು ಪ್ರಶ್ನಿಸಿದಾಗ ಸಚಿವರು ಒಂದು ಕ್ಷಣ ತಬ್ಬಿಬ್ಬಾದರು.
ನಂತರ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಬಿಜೆಪಿ ಕಾರ್ಯಕರ್ತರು ವೃದ್ಧ ಮಹಿಳೆಯನ್ನು ಸಮಾಧಾನಪಡಿಸಿ ಕರೆದೋಯ್ದರು. ನಂತರ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಯೋವೃದ್ಧೆಯ ಪತಿಯನ್ನು ಅನಂತಕುಮಾರ್ ಹೆಗಡೆ ಮಾತನಾಡಿಸಿ ಈ ಪ್ರಹಸನಕ್ಕೆ ತೆರೆ ಎಳೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.