
ನವದೆಹಲಿ(ಅ.5): ಮಕ್ಕಳು ತಮ್ಮ ಪಾಲನೆ ಸರಿಯಾಗಿ ಮಾಡದಿದ್ದಾಗ ಪೋಷಕರು ಪಿತ್ರಾರ್ಜಿತ ಆಸ್ತಿಯನ್ನು ಅವರಿಗೆ ವರ್ಗಾಯಿಸದೇ ಇರಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಮಹಿಳೆಯೊಬ್ಬಳು ತನ್ನ ಅತ್ತೆ-ಮಾವನಿಗೆ ಕಿರುಕುಳ ನೀಡಿದ ಕುರಿತಾದ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್, ಪಿತ್ರಾರ್ಜಿತ ಆಸ್ತಿಯನ್ನೂ ಮಕ್ಕಳಿಗೆ ವರ್ಗಾಯಿಸದೇ ಇರುವ ಹಕ್ಕನ್ನು ಪೋಷಕರು ಹೊಂದಿದ್ದಾರೆ ಎಂದು ಹೇಳಿದೆ. ಅಲ್ಲದೇ ಕೂಡಲೇ ಪೋಷಕರಿಗೆ ಸೇರಿದ ಒಂದನೇ ಮಹಡಿಯ ಮನೆಯನ್ನು ತೊರೆಯುವಂತೆ ಮಹಿಳೆಗೆ ಕೋರ್ಟ್ ಆದೇಶ ನೀಡಿದೆ.
ಹಿರಿಯ ಜೀವಗಳು ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಸ್ವಂತ ಮಕ್ಕಳೇ ಪೋಷಕರನ್ನು ಸರಿಯಾಗಿ ನೋಡಿಕೊಳ್ಳದಿದ್ದಾಗ ಪಿತ್ರಾರ್ಜಿತ ಮತ್ತು ಸ್ವಯಾರ್ಜಿತ ಎರಡೂ ಬಗೆಯ ಆಸ್ತಿಯಿಂದ ಅವರನ್ನು ಹೊರಗಿಡುವ ಹಕ್ಕನ್ನು ಪೋಷಕರು ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.