ಸ್ವತಂತ್ರ ಲಿಂಗಾಯತ ಧರ್ಮಕ್ಕೂ ಚುನಾವಣೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

Published : Dec 24, 2017, 01:08 PM ISTUpdated : Apr 11, 2018, 12:55 PM IST
ಸ್ವತಂತ್ರ ಲಿಂಗಾಯತ ಧರ್ಮಕ್ಕೂ ಚುನಾವಣೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಬಂದಿದ್ದ ಎಲ್ಲ 5 ಅರ್ಜಿಗಳನ್ನು ಅಲ್ಪಸಂಖ್ಯಾತರ ಆಯೋಗಕ್ಕೆ ಕಳಿಸಿದ್ದೇನೆ, ಉಳಿದದ್ದು ಆಯೋಗಕ್ಕೆ ಬಿಟ್ಟ ವಿಷಯ ಮಹದಾಯಿ ವಿಚಾರವಾಗಿ ಬಿಜೆಪಿಯು ನಾಟಕ ಮಾಡುತ್ತಿದೆ. ಪರ್ರಿಕ್ಕರ್ ಮತ್ತು ಯಡಿಯೂರಪ್ಪ ಸೇರಿ ಹೈಡ್ರಾಮಾ ನಡೆಸಿದ್ದಾರೆ

ಹಾವೇರಿ: ಲಿಂಗಾಯತ ಸ್ವತಂತ್ರ ಧರ್ಮ ವಿಷಯಕ್ಕೂ ಚುನಾವಣೆಗೂ ಸಂಬಂಧವಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ,  ಸಿದ್ದರಾಮಯ್ಯ ಹೇಳಿಕೆ ಲಿಂಗಾಯತ ಸ್ವತಂತ್ರ ಧರ್ಮ ವಿಷಯಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಈ ವಿಷಯಕ್ಕೆ ಸಂಬಂಧಿಸಿ ಬಂದಿದ್ದ ಎಲ್ಲ 5 ಅರ್ಜಿಗಳನ್ನು ಅಲ್ಪಸಂಖ್ಯಾತರ ಆಯೋಗಕ್ಕೆ ಕಳಿಸಿದ್ದೇನೆ. ಉಳಿದದ್ದು ಆಯೋಗಕ್ಕೆ ಬಿಟ್ಟ ವಿಷಯ, ಎಂದು ಹೇಳಿದ್ದಾರೆ.

ಸರ್ಕಾರದ ಕೆಲಸವನ್ನು ನಾವು ಮಾಡಿದ್ದೇವೆ. ಇದರಲ್ಲಿ ರಾಜಕೀಯವಿಲ್ಲ. ಸದಾಶಿವ ಆಯೋಗದ ವರದಿ ಅನುಷ್ಠಾನ ಕುರಿತು ಡಿ.31ಕ್ಕೆ ಸಭೆ ಕರೆಯಲಾಗಿದ್ದು, ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮಹದಾಯಿ ವಿಚಾರವಾಗಿ ಬಿಜೆಪಿಯು ನಾಟಕ ಮಾಡುತ್ತಿದೆ. ಪರ್ರಿಕ್ಕರ್ ಮತ್ತು ಯಡಿಯೂರಪ್ಪ ಸೇರಿ ಹೈಡ್ರಾಮಾ ನಡೆಸಿದ್ದಾರೆ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಕತ್ತಿದ್ದರೆ ಬಂಧಿಸಲಿ ಎಂಬ ಶೋಭಾ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವು ಯಾರನ್ನೂ ಬಂಧಿಸುವುದಿಲ್ಲ. ಅದನ್ನು ಪೊಲೀಸರು ಮಾಡುತ್ತಾರೆ. ಕಾನೂನು ಪ್ರಕಾರ ತಪ್ಪಿತಸ್ಥರನ್ನು ಬಂಧಿಸುತ್ತಾರೆ ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಹುಲ್ ಭೇಟಿ ಆಗಲು ಜ.7ರ ನಂತರ ಸಿದ್ದು, ಡಿಕೆಶಿ ದೆಹಲಿಗೆ ?
ಅಭಿಮಾನಿಗಳು ಹೊಡೆದಾಡಬೇಡಿ, ನಿಮ್ಮ ಬದುಕು ಕಟ್ಟಿಕೊಳ್ಳಿ: ನಟ ಡಾಲಿ ಧನಂಜಯ ಮನವಿ