
ನವದೆಹಲಿ: ಉತ್ತರ ಕರ್ನಾಟಕದ ಜನತೆ ಬಿಜೆಪಿಯ ಪ್ರಚೋದನೆಗೆ ಒಳಗಾಗಬಾರದು, ತಾವು ಹಾಗೂ ತಮ್ಮ ಪುತ್ರ, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೀವಿತಾವಧಿ ಯಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಲಾರದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿ ದ್ದಾರೆ.
ರಾಜ್ಯ ಬಜೆಟ್ ಅನುದಾನ ಹಂಚಿಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಿಲ್ಲ. ಯಡಿಯೂರಪ್ಪ ಸೃಷ್ಟಿಸಿರುವ ಪ್ರಚೋದನೆ ನಿಜವಾಗುವುದಿಲ್ಲ. ಕೆಲವು ಜನರು ಉತ್ತರ ಕರ್ನಾಟಕ ಪ್ರತ್ಯೇಕ ಆಗಬೇಕೆಂದು ಬಯಸಿದರೆ, ನನ್ನ ಮತ್ತು ನನ್ನ ಜೀವಿತಾವಧಿಯಲ್ಲಿ ಅದು ಆಗುವುದಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ’ ಎಂದು ದೇವೇಗೌಡರು ಸಂದರ್ಶ ವೊಂದರಲ್ಲಿ ಹೇಳಿದ್ದಾರೆ.
ಉ. ಕರ್ನಾಟಕದ ಜನತೆಯನ್ನು ಯಡಿಯೂರಪ್ಪ ಪ್ರಚೋದಿಸುತ್ತಿದ್ದಾರೆ. ಹೆಚ್ಚು ಸ್ಥಾನ ಗೆದ್ದರೂ ಸರ್ಕಾರ ರಚಿಸಲಾಗದ ಕೋಪ ಅವರಲ್ಲಿ ಇನ್ನೂ ಕಡಿಮೆಯಾಗಿಲ್ಲ ಎಂದು ಗೌಡರು ತಿಳಿಸಿದ್ದಾರೆ. ರೈತರ ಸಾಲಮನ್ನಾ, ರಾಜ್ಯ ಬಜೆಟ್ ಮತ್ತಿತರ ವಿಷಯಗಳಲ್ಲಿ ಯಡಿಯೂರಪ್ಪ ಜನರನ್ನು ಬೆದರಿಸಲು ಆರಂಭಿಸಿದ್ದಾರೆ. ಅಶಾಂತಿ ಸೃಷ್ಟಿಸುವುದಷ್ಟೇ ಅವರ ಉದ್ದೇಶವಾಗಿದೆ. ಕುಮಾರಸ್ವಾಮಿ ಅವರು ಈಗಾಗಲೇ ಎರಡು ಪ್ರಮುಖ ಸರ್ಕಾರಿ ಇಲಾಖೆಗಳನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ವರ್ಗಾಯಿಸಲು ಆದೇಶಿಸಿದ್ದಾರೆ ಎಂದು ದೇವೇಗೌಡ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.