ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಅವಘಡ: ಸೀರಿಯಲ್‌ ನಟಿ ರಚನಾ, ಸಹನಟ ಜೀವನ್ ದುರ್ಮರಣ

Published : Aug 24, 2017, 08:42 AM ISTUpdated : Apr 11, 2018, 01:00 PM IST
ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಅವಘಡ: ಸೀರಿಯಲ್‌ ನಟಿ ರಚನಾ, ಸಹನಟ ಜೀವನ್ ದುರ್ಮರಣ

ಸಾರಾಂಶ

ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಮಾಗಡಿ ತಾಲೂಕಿನ ಸೋಲೂರು ಬಳಿ ಸಂಭವಿಸಿದ ಅಪಘಾತವೊಂದು ಸಂಭವಿಸಿದ್ದು, ಈ ದುರಂತದಲ್ಲಿ ತ್ರಿವೇಣಿ ಸಂಗಮ, ಮಧುಬಾಲಾ, ಮಹಾನದಿ ಧಾರವಾಹಿಗಳಲ್ಲಿ ನಟಿಸಿದ್ದ ನಟಿ ರಚನಾ ಹಾಗೂ ಸಹನಟ ಜೀವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು(ಆ.24): ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಮಾಗಡಿ ತಾಲೂಕಿನ ಸೋಲೂರು ಬಳಿ ಸಂಭವಿಸಿದ ಅಪಘಾತವೊಂದು ಸಂಭವಿಸಿದ್ದು, ಈ ದುರಂತದಲ್ಲಿ ತ್ರಿವೇಣಿ ಸಂಗಮ, ಮಧುಬಾಲಾ, ಮಹಾನದಿ ಧಾರವಾಹಿಗಳಲ್ಲಿ ನಟಿಸಿದ್ದ ನಟಿ ರಚನಾ ಹಾಗೂ ಸಹನಟ ಜೀವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಚನಾ ಮತ್ತು ಜೀವನ್, ನಟ ಕಾರ್ತಿಕ್ ಹುಟ್ಟುಹಬ್ಬದ ನಿಮಿತ್ತ ದೇವರ ದರ್ಶನಕ್ಕೆ ತನ್ನ ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಮಣ್ಯಕ್ಕೆ ಸಫಾರಿ ಕಾರಿನಲ್ಲಿ ತೆರಳುತ್ತಿದ್ದರು. ಆದರೆ ರಾತ್ರಿ ಸುಮಾರು 2 ಗಂಟೆಗೆ ಮಾಗಡಿ ತಾಲೂಕಿನ ಸೋಲೂರು ಬಳಿ ರಸ್ತೆಯಲ್ಲಿ ನಿಂತಿದ್ದ ಕ್ಯಾಂಟರ್‌'ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ನಟಿ ರಚನಾ ಮತ್ತು ಸಹನಟ ಜೀವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಈ ದುರಂತದಲ್ಲಿ  ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಿ ಎಸ್ ರಂಜಿತ್, ಉತ್ತಮ್, ಹೊನ್ನೇಶ್, ಕಾರ್ತಿಕ್, ಮತ್ತು ಎರಿಕ್ ಎಂಬ ಸಹ ನಟರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತ್ರಿವೇಣಿ ಸಂಗಮ, ಮಧುಬಾಲಾ, ಮಹಾನದಿ, ಧಾರವಾಹಿಗಳಲ್ಲಿ ನಟಿ ರಚನಾ ಮುಖ್ಯ ಭೂಮಿಕೆಯನ್ನು ನಿಭಾಯಿಸುತ್ತಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀರವೈಶ ಲಿಂಗಾಯತ ಸಮಾಜ ಒಡೆದಾಳಲು ಯತ್ನ: ವಿಜಯೇಂದ್ರ
ತಾಕತ್ತಿದ್ರೆ ನೋಟಲ್ಲಿರುವ ಗಾಂಧಿ ಚಿತ್ರ ತೆಗೆಯಿರಿ: ಕೇಂದ್ರಕ್ಕೆ ಡಿಕೆಶಿ ಸವಾಲು!