ಮೈಸೂರು ರಸ್ತೆಯಲ್ಲಿ ಸಂಚರಿಸುವವರಿಗೆ ಗುಡ್ ನ್ಯೂಸ್

Published : May 07, 2019, 10:30 AM IST
ಮೈಸೂರು ರಸ್ತೆಯಲ್ಲಿ ಸಂಚರಿಸುವವರಿಗೆ ಗುಡ್ ನ್ಯೂಸ್

ಸಾರಾಂಶ

ಮೈಸೂರು ರಸ್ತೆಯಲ್ಲಿ ಸಂಚರಿಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಲೋಕೋಪಯೋಗಿ ಸಚಿವ ರೇವಣ್ಣ ಮೈಸೂರು ರಸ್ತೆ ಪ್ರಯಾಣಿಕರಿಗೆ ಈ ಸುದ್ದಿ ನೀಡಿದ್ದಾರೆ. 

ಬೆಂಗಳೂರು :  ಬಹುತೇಕ ರಾಜ್ಯ ಹೆದ್ದಾರಿಗಳಿಗೆ ಸರ್ವೀಸ್ ರಸ್ತೆ ಇಲ್ಲ. ಟೋಲ್‌ ಪಾವತಿಸಲು ಸಾಧ್ಯವಾಗದವರು ಶುಲ್ಕ ಪಾವತಿಸದೆ ಸರ್ವೀಸ್  ರಸ್ತೆಯಲ್ಲಿ ಓಡಾಡಲು ಅವಕಾಶ ನೀಡಬೇಕು. ಹೀಗಾಗಿ ನಾವು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿ ವೇಳೆ 2 ಪಥದ ಸರ್ವೀಸ್ ರಸ್ತೆ ನಿರ್ಮಿಸುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯಲ್ಲಿ ಚುನಾವಣಾ ಹಣ ಸಂಗ್ರಹಕ್ಕೆ 1400 ಕೋಟಿ ರು. ಮೊತ್ತದ ಹಣವನ್ನು ಕಾಮಗಾರಿ ಮುಗಿಯದೆ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನಾನು ಒಂದು ರು. ತುಂಡು ಗುತ್ತಿಗೆಯನ್ನೂ ನೀಡಿಲ್ಲ. ಯಡಿಯೂರಪ್ಪ ಅವರು ತಮ್ಮ ಆರೋಪವನ್ನು ಸಾಬೀತು ಮಾಡಲಿ ಎಂದು ರೇವಣ್ಣ ಸವಾಲು ಎಸೆದರು.

ಬಿಡಿಎ ಮುಖ್ಯ ಇಂಜಿನಿಯರ್‌ ಮೇಲಿನ ಹಗರಣದ ಆರೋಪದ ಬಗ್ಗೆ ಮಾತನಾಡಿದ ಅವರು, ಅವರು ಯಾರು ಎಂಬುದೇ ನನಗೆ ಗೊತ್ತಿಲ್ಲ. ನನ್ನ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗೆ ಮಾತ್ರ ನಾನು ಉತ್ತರಿಸುತ್ತೇನೆ. ಬಿಡಿಎ ಬೆಂಗಳೂರು ನಗರಾಭಿವೃದ್ಧಿ ಇಲಾಖೆಗೆ ಬರುತ್ತದೆ. ಪರಮೇಶ್ವರ್‌ ಅವರನ್ನು ಕೇಳಿ ಎಂದರು.

ಬಿಎಸ್‌ವೈ ಕೇಳಿ :  ರಾಜ್ಯ ಹೆದ್ದಾರಿಗಳಿಗೆ ಟೋಲ್‌ ವಿಧಿಸುವ ನಿರ್ಣಯ ಮಾಡಿ ಅಧಿಕೃತ ರಾಜ್ಯ ಪತ್ರ ಹೊರಡಿಸಿದ್ದು ಹಿಂದಿನ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ. ಹೀಗಾಗಿ ಟೋಲ್‌ ಬಗ್ಗೆ ಯಡಿಯೂರಪ್ಪ ಅವರನ್ನೇ ಪ್ರಶ್ನಿಸಬೇಕು ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ರಾಜ್ಯ ಹೆದ್ದಾರಿಗಳಿಗೆ ಟೋಲ್‌ ವಿಧಿಸುವ ನಿರ್ಧಾರ ಕೈಗೊಂಡಿದ್ದು ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದ ಹಿಂದಿನ ಸರ್ಕಾರ. ಈ ಬಗ್ಗೆ 2011ರಲ್ಲಿ ನಿರ್ಣಯ ಮಾಡಿ ಅಧಿಕೃತ ರಾಜ್ಯ ಪತ್ರ ಹೊರಡಿಸಿದ್ದರು. ಇದರಡಿ 2009-13ರ ಅವಧಿಯಲ್ಲಿ ಹುಡ್ಕೊ, ವಿಶ್ವ ಬ್ಯಾಂಕ್‌ ಸೇರಿದಂತೆ ವಿವಿಧೆಡೆ ಮೂರು ಸಾವಿರ ಕೋಟಿ ರು. ಸಾಲ ಪಡೆಯಲಾಗಿದೆ.

ಒಟ್ಟು 17 ರಸ್ತೆ ಅಭಿವೃದ್ಧಿಪಡಿಸುತ್ತಿದ್ದು, ಏಳು ರಸ್ತೆಗಳಿಗೆ ಟೋಲ್‌ ವಿಧಿಸಲು ಟೆಂಡರ್‌ ನೀಡಲಾಗಿದೆ. ರಸ್ತೆ ತೆರಿಗೆ ಕಟ್ಟುತ್ತಿದ್ದರೂ ಪುನಃ ರಾಜ್ಯ ಹೆದ್ದಾರಿಗಳಿಗೂ ತೆರಿಗೆ ವಿಧಿಸುತ್ತಿರುವುದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ. ರಸ್ತೆಗಳ ನಿರ್ವಹಣೆಗೆ ಹಣ ಬೇಕಾಗುತ್ತದೆ. ಒಂದು ವೇಳೆ ಟೋಲ್‌ ಬಗ್ಗೆ ಯಾವುದಾದರೂ ಪ್ರಶ್ನೆಗಳಿದ್ದರೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಪ್ರಶ್ನಿಸಿ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!