
ಚೆನ್ನೈ(ಅ.20): ತಮಿಳುನಾಡು ಹಣಕಾಸು ಸಚಿವ ಒ. ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ನಿನ್ನೆ ಮೊದಲ ಬಾರಿಗೆ ಸಂಪುಟ ಸಭೆ ನಡೆಯಿತು. ಕಾವೇರಿ ವಿವಾದ ಸೇರಿ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಆದ್ರೆ, ಸಿಎಂ ಜಯಲಲಿತಾ ಫೋಟೋ ಇರಿಸಿಕೊಂಡು ಸಭೆ ನಡೆಸಿದ್ದು ವಿಶೇಷವಾಗಿತ್ತು.
ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ ಅವರು ಹೊಂದಿದ್ದ ಖಾತೆಗಳನ್ನು ಪನ್ನೀರ್ಸೆಲ್ವಂ ಅವರಿಗೆ ವಹಿಸಲಾಗಿದೆ. ಹಾಗೆಯೇ ಸಂಪುಟ ಸಭೆ ನಡೆಸುವ ಅಧಿಕಾರವನ್ನೂ ಅವರಿಗೆ ರಾಜ್ಯಪಾಲರು ವಹಿಸಿದ್ದಾರೆ. ಹೀಗಾಗಿ ನಿನ್ನೆ ಸಂಪುಟ ಸಭೆ ನಡೆಸಲಾಯ್ತು. ಈ ವೇಳೆ ಮೇಜಿನ ಮೇಲೆ ಜಯಲಲಿತಾ ಅವರ ಫೋಟೊ ಇರಿಸಿ ಸಂಪುಟ ಸಭೆ ನಡೆಸಿದ್ದು ವಿಶೇಷ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.