ದೀದಿಗೆ ಮೋದಿ ಏಟು, ಟಿಎಂಸಿ ತೊರೆದ ಇಬ್ಬರು ಶಾಸಕರು, 50 ಮುಖಂಡರು

Published : May 28, 2019, 05:11 PM ISTUpdated : May 28, 2019, 05:17 PM IST
ದೀದಿಗೆ ಮೋದಿ ಏಟು, ಟಿಎಂಸಿ ತೊರೆದ ಇಬ್ಬರು ಶಾಸಕರು, 50 ಮುಖಂಡರು

ಸಾರಾಂಶ

ಲೋಕಸಭಾ ಚುನಾವಣೆಲ್ಲಿ ಬಿಜೆಪಿ ಮಮತಾ ಬ್ಯಾನರ್ಜಿ ಕೋಟೆಗೆ ನುಗ್ಗಿ ಸರಿಯಾದ ಹೊಡೆತವನ್ನೇ ನೀಡಿತ್ತು.  ಈಗ ಮತ್ತೆ ಅದರ ಮುಂದುವರಿದ ಭಾಗದಲ್ಲಿ ದೊಡ್ಡ ಮಟ್ಟದ ಆಪರೇಶನ್ ನಡೆದಿದೆ.

ಕೋಲ್ಕತ್ತಾ[ಮೇ,. 27] ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರಕಾರಕ್ಕೆ ಸದ್ದಿಲ್ಲದೆ ಬಿಜೆಪಿ ಶಾಕ್ ನೀಡಿದೆ. ನರೇಂದ್ರ ಮೋದಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಡುವೆ ಲೋಕ ಚುನಾವಣೆಗೆಯೂದ್ದಕ್ಕೂ ವಾಕ್ಸಮರ ನಡೆದುಕೊಂಡೆ ಬಂದಿತ್ತು.

50 ಕ್ಕೂ ಅಧಿಕ ಕೌನ್ಸಿಲರ್ ಗಳು ಏಕಕಾಲದಲ್ಲಿ  ಟಿಎಂಸಿ ತೊರೆದು ಬಿಜೆಪಿ ಜಾಯಿನ್ ಆಗಿದ್ದಾರೆ.  ಜತೆಗೆ ಇಬ್ಬರು ಎಂಎಲ್ ಗಲೂ ಕಮಲದ ಕೈ ಹಿಡಿದಿದ್ದಾರೆ. ಸಿಎಪಿಐಎಂನ ಒಬ್ಬ ಎಂಎಲ್ ಎ ಸಹ ಬಿಜೆಪಿ ಜತೆ ಬಂದಿದ್ದಾರೆ.

ರಾಮ್ ದೇವ್ ಜರಿಯುವ ಭರದಲ್ಲಿ ಮೋದಿ ಎಳೆತಂದ ಓವೈಸಿ

ಬಿಜೆಪಿ ಸೇರಿದ ನಂತರ ಎಲ್ಲ ಮುಖಂಡರು ಜೖ ಶ್ರೀರಾಮ್ ಮತ್ತು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳ ಪೈಕಿ ಇದೇ ಮೊದಲ ಸಾರಿ ಬಿಜೆಪಿ 18 ಸ್ಥಾನದಲ್ಲಿ ಜಯಗಳಿಸಿದೆ. ಕೇಂದ್ರದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಏರಲು ಸಿದ್ಧವಾಗಿದ್ದು ಪಕ್ಷಾಂತರ ಪರ್ವ ಆರಂಭವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!
ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ: ಕ್ಷಮೆಗೆ ಆಗ್ರಹ