
ನವದೆಹಲಿ (ಮಾ.21): ನಾರದ ಸ್ಟಿಂಗ್ ಆಪರೇಶನ್ ತನಿಖೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು ಇದರಿಂದ ತೃಣಮೂಲ ಕಾಂಗ್ರೆಸ್ ಗೆ ಹಿನ್ನೆಡೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ 2016 ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಟಿಎಂಸಿ ಹಿರಿಯ ನಾಯಕರು ಅಕ್ರಮವಾಗಿ ಹಣ ಪಡೆದಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕ ಎನ್ನಲಾದ ನಾರದ ಸ್ಟಿಂಗ್ ಟೇಪನ್ನು ಕೆಲವು ಸುದ್ಧಿ ಸಂಸ್ಥೆಗಳು ಬಿಡುಗಡೆಗೊಳಿಸಿತ್ತು. ಈ ಸ್ಟಿಂಗ್ ಆಪರೇಶನ್ ಬಗ್ಗೆ ತನಿಖೆ ನಡೆಸುವಂತೆ ಪಶ್ಚಿಮ ಬಂಗಾಳ ಹೈಕೋರ್ಟ್ ಸಿಬಿಐಗೆ ನಿರ್ದೇಶಿಸಿತ್ತು.
ಈ ತನಿಖೆಯನ್ನು ರದ್ದುಗೊಳಿಸುವಂತೆ ಟಿಎಂಸಿ ಮುಖಂಡ ಸುವೆಂದು ಅಧಿಕಾರಿ ಮತ್ತು ಸೌಗತ ರಾಯ್ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಜೊತೆಗೆ ಸಿಬಿಐ ನಡೆಸುತ್ತಿರುವ ತನಿಖೆಯನ್ನು ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ಮೇಲ್ವಿಚಾರಣೆ ನಡೆಸಬೇಕು ಎಂದೂ ಅರ್ಜಿಯಲ್ಲಿ ಕೋರಿದ್ದರು. ಇಂದು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.