ಕನ್ನಡ ವಾಣಿಜ್ಯ ಮಂಡಳಿ ಹೆಸರು ರದ್ದು

Published : Apr 09, 2017, 07:50 AM ISTUpdated : Apr 11, 2018, 12:45 PM IST
ಕನ್ನಡ ವಾಣಿಜ್ಯ ಮಂಡಳಿ ಹೆಸರು ರದ್ದು

ಸಾರಾಂಶ

ಈ ರದ್ದತಿ ಆದೇಶದಿಂದ ಸಂತೋಷವಾಗಿದೆ. ಗಲ್ಲಿಗಲ್ಲಿಗೊಂದು ಇಂಥ ವಾಣಿಜ್ಯ ಮಂಡಳಿಗಳು ಹುಟ್ಟಿಕೊಂಡರೆ ಒಂದು ಸಂಸ್ಥೆಗೆ ಯಾವ ಗೌರವ ಉಳಿಯಲು ಸಾಧ್ಯ? ಹಾಗಾಗಿ ನಾನು ಮೇಲ್ಮನವಿ ಸಲ್ಲಿಸಿದ್ದೆ. ವಾಣಿಜ್ಯ ಸಂಸ್ಥೆ ವಿಚಾರವಾಗಿ ಗೊಂದಲ ಹುಟ್ಟಿಸುವ ಕೆಲಸ ನಡೆಯುತ್ತಿದೆ. ಇದೀಗ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಸಾ.ರಾ. ಗೋವಿಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂತಹ ಆದೇಶ ಹೊರಡಿಸುವ ಅಧಿಕಾರಿಯ ವಿರುದ್ಧ ನಾನು ಪ್ರತಿಭಟನೆ ಮಾಡುವವನಿದ್ದೇನೆ. ಅಷ್ಟೇ ಅಲ್ಲ, ಈ ಆದೇಶದ ವಿರುದ್ಧ ನ್ಯಾಯಾಲಯದ ಮೆಟ್ಟಲು ಹತ್ತಲು ತೀರ್ಮಾನಿಸಿದ್ದೇನೆ. ಕರ್ನಾಟಕದಲ್ಲಿ ಕನ್ನಡದ ಹೆಸರಿಟ್ಟಕೊಳ್ಳಬಾರದು ಎಂದು ಆದೇಶ ಹೊರಡಿಸುವುದು ಅವಿವೇಕತನ. ಅವರ ಕಚೇರಿಯ ಎದುರು ಧರಣಿ ಕೂರುವುದಕ್ಕೆ ನಾನು ನಿರ್ಧರಿಸಿದ್ದೇನೆ. ಸೋಮವಾರದಿಂದ ಕಾನೂನು ಪ್ರಕ್ರಿಯೆ ಶುರುವಾಗಲಿದೆ. ಕೃಷ್ಣೇಗೌಡ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ

ಬೆಂಗಳೂರು (ಏ.09): ಕರ್ನಾಟಕ ಡಬ್ಬಿಂಗ್‌ ಚಲನಚಿತ್ರ ವಾಣಿಜ್ಯ ಮಂಡಳಿ ಎಂಬ ಹೆಸರನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎಂಬುದಾಗಿ ತಿದ್ದುಪಡಿ ಮಾಡಿದ ಆದೇಶವನ್ನು ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಹಿಂಪಡೆದುಕೊಂ ಡಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎಂಬ ಹೆಸರಿಗೂ ಈಗಾಗಲೇ ಅಸ್ತಿತ್ವ ದಲ್ಲಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಹೆಸರಿಗೂ ತುಂಬಾ ಹೋಲಿಕೆ ಇರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಕಳೆದ ಜನವರಿ 6ರಂದು ಕರ್ನಾಟಕ ಡಬ್ಬಿಂಗ್‌ ಚಲನಚಿತ್ರ ವಾಣಿಜ್ಯ ಮಂಡಳಿಯ ಹೆಸರನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎಂದು ಬದಲಾಯಿಸಿ ತಿದ್ದುಪಡಿ ಹೊರಡಿಸಿದ್ದರು. ಇದನ್ನು ವಿರೋಧಿಸಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜನವರಿ 12ರಂದೇ ಸಂಘ ಗಳ ಜಿಲ್ಲಾ ನೋಂದಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಡಬ್ಬಿಂಗ್‌ ಚಲನಚಿತ್ರ ಮಂಡಳಿಯ ಹೆಸರನ್ನು ಬದಲಾಯಿಸಿ ನೋಂದಣಿ ಮಾಡಿ ರುವುದು ನೋಂದಣಿ ಕಾಯ್ದೆಗೆ ವಿರುದ್ಧವಾಗಿದೆ ಎಂದು ತಿಳಿಸಿತ್ತು.

ಈ ಕುರಿತು ವಿಚಾರಣೆ ನಡೆಸಿದ ನೋಂದ ಣಾಧಿಕಾರಿಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕರ್ನಾಟಕ ಚಿತ್ರೋದ್ಯಮ ಹಾಗೂ ಸಾರ್ವಜನಿಕರಲ್ಲಿ ಪ್ರತಿಷ್ಠಿತ ಸಂಸ್ಥೆ ಯಾಗಿ ಪ್ರಚಲಿತವಾಗಿದೆ.
ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಮತ್ತು ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ- ಈ ಎರಡೂ ಸಂಸ್ಥೆಗಳ ಸಂಕ್ಷಿಪ್ತ ರೂಪ ಕೆಎಫ್‌ಸಿಸಿ ಎಂದೇ ಆಗಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವುದು ಸಹಜ. ಆದ್ದರಿಂದ, ತಾನು ನೀಡಿರುವ ತಿದ್ದುಪಡಿ ಯನ್ನು ಹಿಂಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ನೋಂದಣಾಧಿಕಾರಿಗಳ ಆದೇಶ ತಿಳಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ