
ಒಡಿಶಾ : ಶನಿವಾರ ಬೆಳ್ಳಂಬೆಳಗ್ಗೆ ಒಡಿಶಾದ ದೆಂಕನಲ್ ಜಿಲ್ಲೆಯ ಕಮಲಂಗಾ ಪ್ರದೇಶದಲ್ಲಿ 7 ಆನೆಗಳು ಸಾವಿಗೀಡಾಗಿವೆ.
ವಿದ್ಯುತ್ ಶಾಕ್ ತಗುಲಿ 7 ಆನೆಗಳು ಸಾವಿಗೀಡಾಗಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಈಗಾಗಲೇ ತನಿಖೆಗೆ ಆದೇಶಿಸಿದೆ.
ಈ ಹಿಂದೆಯೂ ಕೂಡ ಅನೇಕ ಬಾರಿ ಇಂತಹ ಕಾರಣಗಳಿಂದಲೇ ಅನೇಕ ಪ್ರಾಣಿಗಳು ಸಾವನ್ನಪ್ಪಿದ್ದವು.
ಇದರಿಂದ ಪ್ರಾಣಿ ರಕ್ಷಣಾ ಕಾರ್ಯಕರ್ತರು ಹಾಗೂ ಪರಿಸರ ವಾದಿಗಳು ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದು, ಪ್ರಾಣಿಗಳ ಸ್ಥಳಗಳನ್ನು ಮನುಷ್ಯ ಆಕ್ರಮಿಸಿಕೊಳ್ಳುತ್ತಿರುವುದೇ ಇಂತಹ ದುರಂತಗಳಿಗೆ ಕಾರಣ ಎಂದಿದ್ದರು. ಇದೀಗ ಮತ್ತೊಮ್ಮೆ ಇಂತಹ ಭಾರೀ ದುರಂತ ನಡೆದಿದ್ದು, ಒಂದೇ ಬಾರಿ 7 ಆನೆಗಳು ಸಾವಿಗೀಡಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.