ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷಾಪಾತ್ರೆ ಹಿಡಿಯಬೇಕಾಗುತ್ತೆ: ಜಿಎಸ್'ಟಿ ಜಾರಿಯಿಂದ ಅನೇಕ ಸಮಸ್ಯೆ

Published : Jun 12, 2017, 09:25 AM ISTUpdated : Apr 11, 2018, 12:47 PM IST
ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷಾಪಾತ್ರೆ ಹಿಡಿಯಬೇಕಾಗುತ್ತೆ: ಜಿಎಸ್'ಟಿ ಜಾರಿಯಿಂದ ಅನೇಕ ಸಮಸ್ಯೆ

ಸಾರಾಂಶ

ಒಂದೇ ದೇಶ, ಭಾಷೆ, ಚುನಾವಣೆ, ಧರ್ಮ, ತೆರಿಗೆಯಂತಹ ಸಿದ್ಧಾಂತಗಳನ್ನು ಹೇರುವ ಮೂಲಕ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಭಾರತೀಯ ಒಕ್ಕೂಟ ವ್ಯವಸ್ಥೆ ಧ್ವಂಸಗೊಳಿಸುತ್ತಿವೆ ಎಂದು ರಾಜ್ಯಸಭಾ ಸದಸ್ಯ, ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಆರೋಪಿಸಿದರು.

ಮೈಸೂರು(ಜೂ.12): ಒಂದೇ ದೇಶ, ಭಾಷೆ, ಚುನಾವಣೆ, ಧರ್ಮ, ತೆರಿಗೆಯಂತಹ ಸಿದ್ಧಾಂತಗಳನ್ನು ಹೇರುವ ಮೂಲಕ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಭಾರತೀಯ ಒಕ್ಕೂಟ ವ್ಯವಸ್ಥೆ ಧ್ವಂಸಗೊಳಿಸುತ್ತಿವೆ ಎಂದು ರಾಜ್ಯಸಭಾ ಸದಸ್ಯ, ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಆರೋಪಿಸಿದರು.

ನಗರದಲ್ಲಿ ಭಾನುವಾರ ನಡೆದ ‘ಸಂವಿಧಾನ ಉಳಿಸಲು ರಾಜ್ಯ ಮಟ್ಟದ ದೇಶಪ್ರೇಮಿ' ಸಮಾವೇಶ ಉದ್ಘಾಟಿಸಿ ಮಾತನಾಡಿ, ಸಂವಿಧಾನದ ಅನುಚ್ಛೇದ 356 ಅನ್ನು ತೆಗೆದು ಹಾಕಲು ಸಂಸತ್ತಿನಲ್ಲಿ ಚರ್ಚಿಸದ ಮೋದಿ ಸರ್ಕಾರ ಹಿಂಬಾಗಿಲಿನಿಂದ ರಾಜ್ಯ ವಿಧಾನಮಂಡಲ ಅಧಿಕಾರವನ್ನು ತನ್ನ ಹತೋಟಿಗೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಮುಂದೆ ರಾಜ್ಯ ಸರ್ಕಾರಗಳು ಕೇಂದ್ರದ ಮಾತು ಕೇಳದಿದ್ದರೆ ತನ್ನ ಹಕ್ಕು ಚಲಾಯಿಸಿ ಸರ್ಕಾರವನ್ನು ಕಿತ್ತೊಗೆಯುವ ಹುನ್ನಾರ ಇದರ ಹಿಂದೆ ಅಡಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ದೇಶದಲ್ಲಿ ಜಿಎಸ್‌ಟಿ ತಂದಿದ್ದರಿಂದ ಅನೇಕ ಸಮಸ್ಯೆಗಳು ಎದುರಾಗಿವೆ.

ರಾಜ್ಯಗಳಲ್ಲಿ ಪ್ರಾಕೃತಿಕ ವಿಕೋಪಗಳು ನಡೆದಾಗ ಹಣಕ್ಕಾಗಿ ಕೇಂದ್ರದ ಮುಂದೆ ಭಿಕ್ಷಾ ಪಾತ್ರೆ ಹಿಡಿಯಬೇಕಾಗುತ್ತದೆ. ಗೋಹತ್ಯೆ ಕಾನೂನುಗಳು ರಾಜ್ಯ ಸರ್ಕಾರಗಳ ಪರಿಧಿಗೆ ಬರುವುದರಿಂದ ಕೇಂದ್ರವೇ ಗೋವುಗಳ ಮಾರಾಟ ನಿರ್ಬಂಧ ಕಾಯಿದೆ ತಂದು ರಾಜ್ಯಗಳ ಮೇಲೆ ಹೇರುತ್ತಿದೆ. ಆರ್‌ಎಸ್‌ಎಸ್‌ನ ರಾಜಕೀಯ ಅಸ್ತ್ರವಾಗಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?