ಮಳೆ ಇಲ್ಲದೇ ಕಬ್ಬಿನ ನಗರಿ ಬರಗಾಲಕ್ಕೆ ತತ್ತರ

Published : Jun 03, 2019, 09:32 AM ISTUpdated : Jun 03, 2019, 09:34 AM IST
ಮಳೆ ಇಲ್ಲದೇ ಕಬ್ಬಿನ ನಗರಿ ಬರಗಾಲಕ್ಕೆ ತತ್ತರ

ಸಾರಾಂಶ

ರೈತ ಕಂಗಾಲು ಕೃಷ್ಣಾ ನದಿ ಬತ್ತಿದ್ದರಿಂದ ಒಣಗುತ್ತಿದೆ 31000 ಹೆಕ್ಟೇರ್ ಕಬ್ಬು | ಇಡೀ ಮಂಡ್ಯ ಜಿಲ್ಲೆ ಬೆಳೆವ ಕಬ್ಬನ್ನು ಅಥಣಿ ತಾಲೂಕೊಂದೇ ಬೆಳೆಯುತ್ತದೆ 

ಬೆಳಗಾವಿ (ಜೂ. 03): ರಾಜ್ಯದಲ್ಲೇ ಅತೀ ಹೆಚ್ಚು ಕಬ್ಬು ಬೆಳೆಯುವುದಕ್ಕೆ ಖ್ಯಾತಿ ಪಡೆದಿರುವ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ಬೇಸಿಗೆ ಬೆಳೆಗಳು ಒಣಗುವ ಭೀತಿಗೆ ಒಳಗಾಗಿವೆ. ಕಳೆದ  ಎರಡು ತಿಂಗಳಿಂದ ಕೃಷ್ಣಾ ನದಿ ಬತ್ತಿರುವುದರಿಂದ ಅತಿ ಹೆಚ್ಚು ನೀರು ಬೇಡುವ ಬೆಳೆಯಾದ ಕಬ್ಬು ದಿನದಿಂದ ದಿನಕ್ಕೆ ಒಣಗುತ್ತಿದೆ.

ಅಥಣಿ ತಾಲೂಕು ಒಂದರಲ್ಲೇ ಪ್ರತಿ ವರ್ಷ ಸುಮಾರು 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತದೆ. ಇಡೀ ಮಂಡ್ಯ ಜಿಲ್ಲೆಯಾದ್ಯಂತ ಬೆಳೆಯುವುದಕ್ಕಿಂತ ಅಧಿಕ ಕಬ್ಬನ್ನು ಅಥಣಿ ತಾಲೂಕೊಂದರಲ್ಲೇ ಬೆಳೆಯಲಾಗುತ್ತಿದೆ.

ಅಂದರೆ ಮಂಡ್ಯ ಸುಮಾರು 65 ಲಕ್ಷ ಟನ್ ಕಬ್ಬು ಬೆಳೆದರೆ, ಅಥಣಿಯಲ್ಲಿ ಸುಮಾರು 70 ಲಕ್ಷ ಟನ್ ಕಬ್ಬು ಉತ್ಪಾದಿಸಲಾಗುತ್ತಿದೆ. ನದಿ ನೀರನ್ನೇ ಅವಲಂಬಿಸಿ ಕಬ್ಬು ಬೆಳೆದಿದ್ದು, ಅನಂತಪುರ, ತೆಲಸಂಗ ಜಿ.ಪಂ ವ್ಯಾಪ್ತಿಯ 31 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಒಣಗಿದೆ.

ಮೇವಾಗಿ ಬಳಕೆ: ನದಿ ದಡದ ಮೇಲಿನ ಗ್ರಾಮಗಳಲ್ಲಿ ಶೇ. 90 ರಷ್ಟು ಕಬ್ಬನ್ನೇ ಬೆಳೆಯಲಾಗಿದೆ. ಅಲ್ಲದೆ ಏತ ನೀರಾವರಿ ಯೋಜನೆ ಮೂಲಕ ರೈತರು ಸ್ವಯಂ ಪೈಪ್‌ಲೈನ್ ಮೂಲಕ ಸುಮಾರು 90 ಕಿ.ಮೀ. ದೂರದಿಂದ ನೀರನ್ನು ತೆಗೆದುಕೊಂಡು ಹೋಗಿ ಕಬ್ಬು ಬೆಳೆದಿದ್ದಾರೆ.

ಬರೆ ಮೇಲೆ ಬರೆ:

ಸಾಲ ಮಾಡಿಕೊಂಡು ರೈತರು ಕಬ್ಬು ಬೆಳೆದಿದ್ದಾರೆ. ಆದರೆ ಈಗ ಆಗಿರುವ ಸಾಲವನ್ನು ಮುಂದೆ ಹೇಗೆ ತೀರಿಸುವುದು ಹಾಗೂ ತಮ್ಮ ಮುಂದಿನ ಉಪಜೀವನ ಹೇಗೆ ಸಾಗಿಸುವುದು? ಎಂಬ ಚಿಂತೆ ಕಾಡುತ್ತಿದೆ. ಮತ್ತೊಂದೆಡೆ ಕಳೆದ ಬಾರಿ ಸಾಗಿಸಿದ ಕಬ್ಬಿಗೆ ಕಾರ್ಖಾನೆಗಳು ಬಾಕಿ ಬಿಲ್ ಅನ್ನು ಹಾಗೆ ಉಳಿಸಿಕೊಂಡಿರುವುದು ರೈತರಿಗೆ ಬರೆ ಮೇಲೆ ಬರೆ ಎಳೆದಂತಾಗಿದೆ. ಮಳೆಗಾಲದಂ ತಹ ಸಂದರ್ಭದಲ್ಲಿ ಕೃಷ್ಣಾ ನದಿ ತುಂಬಿ ಹರಿಯುತ್ತದೆ. ಆಗ ಹರಿವ ನೀರನ್ನು ಬಳಸಿಕೊಂಡು ಯೋಜನೆ ರೂಪಿಸಬೇಕಿದೆ.

ಕಬ್ಬಿನ ಕೊರತೆ ಭೀತಿ:

ಮಂಡ್ಯ ಜಿಲ್ಲೆಯಲ್ಲಿ 6 ಸಕ್ಕರೆ ಕಾರ್ಖಾನೆಗಳಿವೆ. ಆದರೆ ಅಥಣಿ ತಾಲೂಕೊಂದರಲ್ಲೇ 5 ಸಕ್ಕರೆ ಕಾರ್ಖಾನೆಗಳಿವೆ. ಅಲ್ಲದೆ, ತಾಲೂಕಿನ ಕಬ್ಬು ನೆರೆಯ ಚಿಕ್ಕೋಡಿ ತಾಲೂಕು ಮತ್ತು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಕ್ಕರೆ ಕಾರ್ಖಾನೆ ಸೇರಿ ಮಹಾರಾಷ್ಟ್ರದ 3 ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆಯಾಗುತ್ತದೆ. ಹೀಗಾಗಿ ಸುಮಾರು ಶೇ.40 ರಷ್ಟು ಭಾಗ ಕಬ್ಬು ಒಣಗಿದೆ. ಇದರಿಂದ ಮುಂದಿನ ಹಂಗಾಮಿ ನಲ್ಲಿ ಕಾರ್ಖಾನೆಗಳಿಗೆ ಕಬ್ಬಿನ ಕೊರತೆ ಆಗುವುದು ಖಚಿತ ಎಂದು ಹೇಳಲಾಗುತ್ತಿದೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ