
ನವದೆಹಲಿ[ಸೆ.6] ಸಲಿಂಗ ಕಾಮದ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಸ್ವಾಮಿ,377 ನೇ ಸೆಕ್ಷನ್ ಗೆ ಅಂತ್ಯ ಹಾಡಿರುವ ನ್ಯಾಯಾಲಯ ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ವಿಚಾರವನ್ನು ಯಾಕೆ ಮುಟ್ಟಿಲ್ಲ . ಹಾಗಾದರೆ ಸುಪ್ರೀಂ ಕೋರ್ಟ್ ಮೂಲಭೂತ ಹಕ್ಕುಗಳ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುತ್ತಿದ್ದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಮಾಧ್ಯಮವೊಂದರ ಜತೆ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ ಈ ತೀರ್ಮಾನ ಅಂತಿಮ ಎಂದು ಪರಿಭಾವಿಸಲು ಸಾಧ್ಯವಿಲ್ಲ. ಇಂಥದ್ದೊಂದು ತೀರ್ಪು ಸಮಾಜದ ಸ್ವಾಸ್ಥ್ಯ ಕದಡಿ ಲೈಂಗಿಕ ರೋಗಗಳ ಹೆಚ್ಚಳಕ್ಕೂ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಲಿಂಗ ಕಾಮ ಅಪರಾಧವಲ್ಲ ಎಂದ ಸುಪ್ರೀಂಕೋರ್ಟ್
ಸಲಿಂಗ ಕಾಮ ಎನ್ನುವುದು ಒಂದು ನ್ಯೂನತೆ. ಇದೊಂದು ಕೆಟ್ಟ ಮಾನಸಿಕ ಸ್ಥಿತಿ, ಒಂದು ಪೀಳಿಗೆಯನ್ನೇ ಆತಂಕಕ್ಕೆ ದೂಡಬಹುದು ಎಂದು ಸುಬ್ರಮಣಿಯನ್ ಸ್ವಾಮಿ 2015 ರಲ್ಲಿ ಟ್ವೀಟ್ ಮಾಡಿದ್ದು ದೊಡ್ಡ ಸುದ್ದಿಯಾಗಿತ್ತು.
ಸಮ್ಮತಿಯ ಸಲಿಂಗಕಾಮವನ್ನು ಅಪರಾಧ ಎಂದು ಸಾರುವ 158 ವರ್ಷದಷ್ಟು ಹಳೆಯದಾದ ಐಪಿಸಿ ಸೆಕ್ಷನ್ 377ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ಸಲಿಂಗ ಕಾಮ ಅಪರಾಧವಲ್ಲ ಎಂದು ಹೇಳಿದ್ದು ಇದೀಗ ದೇಶದ ತುಂಬಾ ಚರ್ಚೆ ಹುಟ್ಟುಹಾಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.