
ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪದಿಂದ ಮಾಜಿ ಸಚಿವ ರುದ್ರಪ್ಪ ಲಮಾಣಿಗೆ ಕ್ಲೀನ್ ಚಿಟ್ ದೊರಕಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಸಂಸದರು ಹಾಗು ಶಾಸಕರ ವಿಶೇಷ ಕೋರ್ಟ್ ಕ್ಲೀನ್ ಚಿಟ್ ನೀಡಿದೆ.
2013ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಲಮಾಣಿ ವಿರುದ್ಧ ದೂರು ನೀಡಿದ್ದರು.
ಹಾವೇರಿಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿತ್ತು. ಮಹಿಳೆಯನ್ನು ಮನೆಯಲ್ಲಿ ಕೂಡಿ ಹಾಕಿ ಸೀರೆ ಎಳೆದು, ಅಸಭ್ಯವಾಗಿ ವರ್ತನೆ ಆರೋಪ ಎದುರಾಗಿತ್ತು. ರುದ್ರಪ್ಪ ಲಮಾಣಿ ಸೇರಿ ಹಲವರ ವಿರುದ್ದ ದೂರು ದಾಖಲಾಗಿತ್ತು. ಬಳಿಕ ಈ ಸಂಬಂಧ ತನಿಖೆ ನಡೆಸಿದ್ದ ಹಾವೇರಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈ ಪ್ರಕರಣವನ್ನು ಇತ್ತೀಚಿಗಷ್ಟೇ ಬೆಂಗಳೂರಿನ ವಿಶೇಷ ಕೋರ್ಟ್ಗೆ ವರ್ಗಾವಣೆ ಮಾಡಲಾಗಿತ್ತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲ ಯ ಸೋಮವಾರ ತೀರ್ಪು ಪ್ರಕಟ ಮಾಡಿದ್ದು, ಸಾಕ್ಷ್ಯಾಧಾರ ಕೊರತೆಯಿಂದ ರುದ್ರಪ್ಪ ಲಮಾಣಿ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.