
ಬೆಂಗಳೂರು : ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣ ಮಾಡುವಾಗ ನಿದ್ದೆ ಮಾಡಿಕೊಂಡು ತೆರಳುವ ಮುನ್ನ ವಿದ್ಯಾರ್ಥಿನಿಯರೇ ಎಚ್ಚರಿಕೆ ವಹಿಸಿ. ಯಾಕೆಂದರೆ ಬಸ್ ನಲ್ಲಿ ನಿದ್ದೆ ಮಾಡುತ್ತಿರುವಾದ ಖಾಸಗಿ ಅಂಗಾಂಗಗಳನ್ನು ಸವರುವ ಕಾಮುಕರು ಕಿರಕುಳ ನೀಡುವ ಸಾಧ್ಯತೆ ಇದೆ.
ವಿದ್ಯಾರ್ಥಿನಿಯೋರ್ವಳು ಬೆಂಗಳೂರಿನಿಂದ ಹಾಸನಕ್ಕೆ ತೆರಳುವ ವೇಳೆ ವಿದ್ಯಾರ್ಥಿನಿಯೋರ್ವಳಿಗೆ ಇಂತಹದ್ದೇ ರೀತಿಯ ಅನುಭವವಾಗಿದೆ. ಮುದುಕನೋರ್ವ ಬಸ್ ನಂ. 947ರಲ್ಲಿ ವಿದ್ಯಾರ್ಥನಿಗೆ ಖಾಸಗಿ ಭಾಗಗಗಳನ್ನು ಮುಟ್ಟಿ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿ ಬಸ್ ನಲ್ಲಿ ನಿದ್ದೆ ಮಾಡಿಕೊಂಡು ತೆರಳುತ್ತಿದ್ದ ವೇಳೆ ಕಳೆದ ಆಗಸ್ಟ್ ತಿಂಗಳ 4 ರಂದು ಆಕೆಯ ಮೈ ಸವರಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಕ್ಷಣ ಎಚ್ಚೆತ್ತ ವಿದ್ಯಾರ್ಥಿನಿ ಈ ಬಗ್ಗೆ ಸಹಪ್ರಯಾಣಿಕರ ಗಮನಕ್ಕೆ ತಂದಿದ್ದು, ಪ್ರಯಾಣಿಕರು ಮುದುಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಗಲಿನಲ್ಲೇ ಈ ಘಟನೆ ನಡೆದಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.