
ನವದೆಹಲಿ (ಸೆ.29): ಉರಿ ದಾಳಿಯನ್ನು ಖಂಡಿಸಿ ಭಾರತೀಯ ಸೈನಿಕರು ಪಾಕ್ ಸೇನೆಯ ಮೇಲೆ ದಾಳಿ ಮಾಡಿ ಯಶಸ್ವಿಯಾಗಿರುವುದಕ್ಕೆ ಅಮಿತ್ ಶಾ ಭಾರತೀಯ ಸೇನೆಯನ್ನು ಶ್ಲಾಘಿಸಿದ್ದಾರೆ.
ಅದೇ ರೀತಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ಮನೋಹರ್ ಪರಿಕ್ರರ್ ಹಾಗೂ ಭಾರತೀಯ ಸೇನೆಗೆ ಶಾ ಅಭಿನಂದನೆ ಸಲ್ಲಿಸಿದ್ದಾರೆ.
ಪದೇ ಪದೇ ಭಾರತದ ಗಡಿ ದಾಟಿ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕ್ ಗೆ ಎಚ್ಚರಿಕೆ ಗಂಟೆಯಾಗಿದೆ.
ಭಾರತೀಯ ಸೈನಿಕರು ಶೌರ್ಯವನ್ನು ಪ್ರದರ್ಶಿಸಿದ್ದಾರೆ. ಪಾಕ್ ಭಯೋತ್ಪಾದಕರನ್ನು ಮಟ್ಟ ಹಾಕುವಲ್ಲಿ ನಡೆಸಿದ ಶಸ್ತ್ರದಾಳಿಯಲ್ಲಿ ಯಶಸ್ವಿಯಾಗಿದ್ದಾರೆ. ಯಾವುದೇ ಜೀವಹಾನಿಯಾಗದಂತೆ ಸೈನಿಕರು ಶಸ್ತ್ರದಾಳಿ ನಡೆಸಿರುವುದು ಇದೇ ಮೊದಲು. ಇಡೀ ದೇಶ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.