
ಕೊಚ್ಚಿ(ನ.21): ಶಬರಿಮಲೆಯ ದೇಗುಲ ಇನ್ನು ಮುಂದೆ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲ ಎಂಬ ಹೊಸ ಹೆಸರಿನಿಂದ ಕರೆಯಲ್ಪಡಲಿದೆ. ಈ ಬಗ್ಗೆ ದೇಗುಲದ ಹೊಣೆ ಹೊತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿ ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದೆ. ಪತ್ತನಂತಿಟ್ಟ ಜಿಲ್ಲೆಯಲ್ಲಿರುವ ಈ ದೇಗುಲ ಅಕೃತ ದಾಖಲೆಗಳಲ್ಲಿ ಶ್ರೀ ಧರ್ಮಶಾಸ್ತ ದೇಗುಲ ಎಂಬ ಹೆಸರಿದ್ದರೂ ಸಾರ್ವಜನಿಕವಾಗಿ ಅದು ಅಯ್ಯಪ್ಪ ಸ್ವಾಮಿ ದೇಗುಲ ಎಂದು ಹೆಸರಾಗಿದೆ. ಅ.5ರಂದು ನಡೆದಿದ್ದ ದೇವಸ್ವಂ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ದೇವಸ್ವಂ ಮಂಡಳಿ ವ್ಯಾಪ್ತಿಯಲ್ಲಿ ಧರ್ಮಶಾಸ್ತಾ ಎಂಬ ಹೆಸರಿನ ದೇಗುಲಗಳು ಹಲವಾರು ಇವೆ. ಆದರೆ ಶಬರಿಮಲೆಯಲ್ಲಿ ಮಾತ್ರ ಅಯ್ಯಪ್ಪ ಸ್ವಾಮಿ ಇರುತ್ತಾರೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದೆ ದೇವಸ್ವಂ ಮಂಡಳಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.