
ಕೊಚ್ಚಿ (ಅ. 27): ಕೇರಳದ ಶಬರಿಮಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು 2000 ಜನರನ್ನು ಬೆಂಬಲಿಸಿದ ಬೆನ್ನಲ್ಲೇ ಸರ್ಕಾರಕ್ಕೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಮುಗ್ಧರನ್ನು ಬಂಧಿಸಿದರೆ ಬೆಲೆ ತೆರಬೇಕಾದೀತು ಎಂದು ಅದು ಸರ್ಕಾರವನ್ನು ಎಚ್ಚರಿಸಿದೆ. ಗುರುವಾರ ಪೊಲೀಸರು 1400 ಜನರನ್ನು ಬಂಧಿಸಿದ ೪೫೦ ಕೇಸು ಹಾಕಿದ್ದರು. ಇದನ್ನು ಪ್ರಶ್ನಿಸ ಕೆಲವು ಅಯ್ಯಪ್ಪ ಭಕ್ತರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಶುಕ್ರವಾರ ಇದರ ವಿಚಾರಣೆ ನಡೆಸಿದ ದ್ವಿಸದಸ್ಯ ನ್ಯಾಯ ಪೀಠ, ‘ಸುಮ್ಮನೇ ಚಪ್ಪಾಳೆ ಗಿಟ್ಟಿಸಿಕೊಳ್ಳುವ ತೋರಿಕೆಯ ಕ್ರಮ ಬೇಡ. ಬಂಧಿತರಲ್ಲಿ ಮುಗ್ಧರು ಇದ್ದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿತು.ಅಲ್ಲದೆ, ಶಬರಿಮಲೆಗೆ ಇತ್ತೀಚಿನ ಮಾಸಿಕ ಪೂಜೆ ವೇಳೆ ಬಂದವರು ನಿಜವಾದ ಭಕ್ತರಾ ಎಂಬುದರ ತನಿಖೆ ನಡೆಸಬೇಕು ಎಂದೂ ಆದೇಶಿಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.