
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್ನಲ್ಲಿ ಕೇರಳ ಮಾದರಿಯಲ್ಲಿ ಸಂಘಟನೆಯೊಂದು ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದು, ಐಸಿಸ್ಗೆ ಯುವಕರನ್ನು ಸೇರಿಸುವ ಕಾರ್ಯ ಮಾಡುತ್ತಿದೆ. ಮುಸ್ಲಿಮರು ಎಚ್ಚರದಿಂದ ಇರಬೇಕು ಎಂದು ಮುಸ್ಲಿಂ ಸಂಘಟನೆಯ ಮುಖಂಡರೊಬ್ಬರು ಮಾಡಿದ ಭಾಷಣದ ಸಂಬಂಧ ಮಂಗಳೂರು ಪೊಲೀಸರು ಬುಧವಾರ ತನಿಖೆ ಆರಂಭಿಸಿದ್ದಾರೆ.
ಇತ್ತ ಗುಪ್ತಚರ ಇಲಾಖೆಯೂ ನಿಗಾ ಇರಿಸಿದೆ. ಮಂಗಳೂರಿನ ಸೌತ್ ಕೆನರಾ ಸಲಫಿ ಸಂಘಟನೆಯ ಮುಖಂಡ ಇಸ್ಮಾಯಿಲ್ ಶಾಫಿ ಅವರನ್ನು ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸರು ವಶಕ್ಕೆ ಪಡೆದು 5-6 ತಾಸು ವಿಚಾರಣೆ ನಡೆಸಿದರು.
ಸಭೆಯೊಂದರಲ್ಲಿ ಭಾಷಣ ಮಾಡಿದ್ದ ಇಸ್ಮಾಯಿಲ್ ಶಾಫಿ, ಬಿ.ಸಿ.ರೋಡ್ನಲ್ಲಿ ಕೇರಳ ಮಾದರಿಯಲ್ಲಿ ಯುವಕರನ್ನು ಹಾದಿ ತಪ್ಪಿಸುವ ಗುಂಪೊಂದು ಕಾರ್ಯಾಚರಿಸುತ್ತಿದೆ. ಇದರ ಬಗ್ಗೆ ಎಚ್ಚರದಿಂದ ಇರಬೇಕು ಎಂದಿದ್ದರು. ಅಲ್ಲದೆ ಐಸಿಸ್ ಮಾದರಿಯ ಸಂಘಟನೆಯ ಬಗ್ಗೆ ಭಾಷಣದಲ್ಲಿ ಪರೋಕ್ಷವಾಗಿ ಪ್ರಸ್ತಾಪಿಸಿದ್ದರು.
ಬ್ಯಾರಿ ಭಾಷೆಯಲ್ಲಿ ಮಾಡಿದ ಭಾಷಣದ ಈ ಆಡಿಯೋ ಜಾಲತಾಣಗಳಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.