ಯುದ್ಧ ಬೇಡ ಶಾಂತಿ ಕಾಪಾಡೋಣ: ಶಾಹಿದ್ ಅಫ್ರಿದಿ

Published : Sep 30, 2016, 12:40 PM ISTUpdated : Apr 11, 2018, 12:44 PM IST
ಯುದ್ಧ ಬೇಡ ಶಾಂತಿ ಕಾಪಾಡೋಣ: ಶಾಹಿದ್ ಅಫ್ರಿದಿ

ಸಾರಾಂಶ

ನವದೆಹಲಿ(ಸೆ.30): ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರ ನೆಲೆಯ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಪ್ರತಿಕ್ರಿಯಿಸರುವ ಪಾಕಿಸ್ತಾನಿ ಕ್ರಿಕೆಟಿಗ ಯಾರೂ ಯುದ್ಧಕ್ಕೆ ಮುಂದಾಗುವುದು ಬೇಡ, ಎರಡೂ ರಾಷ್ಟ್ರಗಳು ಶಾಂತಿ ಕಾಪಾಡಬೇಕಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನೆರೆ ರಾಷ್ಟ್ರಗಳಾಗಿದ್ದು, ಯುದ್ಧ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ಯುದ್ಧ ಉಭಯ ರಾಷ್ಟ್ರಗಳ ಮೇಲೆ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.   

ಪಾಕಿಸ್ತಾನ ಶಾಂತಿಯನ್ನು ಬಯಸುವ ದೇಶ, ಹಾಗೆಯೇ ಇತರ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವಿಟ್ಟುಕೊಳ್ಳಲು ಬಯಸುತ್ತದೆ. ಸಮಸ್ಯೆಗಳು ಮಾತುಕತೆ ಮೂಲಕ ಬಗೆಹರಿಯುತ್ತವೆ ಎನ್ನುವುದಾದರೇ, ಕಠಿಣ ನಿರ್ಧಾರ ಕೈಗೊಳ್ಳುವ ಅವಶ್ಯಕತೆಯೇ ಇಲ್ಲ ಎಂದು ಪಾಕ್ ಕ್ರಿಕೆಟಿಗ ಹೇಳಿದ್ದಾರೆ.

ಈ ಹಿಂದೆ ಅಫ್ರಿದಿ, ನಾನು ಭಾರತದಲ್ಲಿ ಕ್ರಿಕೆಟ್ ಆಡುವುದನ್ನು ಎಂಜಾಯ್ ಮಾಡುತ್ತೇನೆ. ಪಾಕಿಸ್ತಾನದ ಜನರಿಗಿಂತ ಭಾರತದ ಅಭಿಮಾನಿಗಳು ನನಗೆ ಹೆಚ್ಚು ಪ್ರೀತಿ ನೀಡಿದ್ದಾರೆ ಎಂದು ಹೇಳುವ ಮೂಲಕ ಪಾಕ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

 

    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!