
ದೆಹಲಿ(ಅ.01): ಉರಿ ಸೇನಾ ಕೇಂದ್ರದ ಮೇಲೆ ಪಾಕಿಸ್ಥಾನ ಮೂಲದ ಭಯೋತ್ಪಾದಕರು ದಾಳಿ ನಡೆಸಿ, ಭಾರತೀಯ ಸೈನಿಕರ ಸಾವಿಗೆ ಕಾರಣರಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಪಾಕ್ ಗಡಿಯನ್ನು ದಾಟಿ 30ಕ್ಕೂ ಹೆಚ್ಚು ಉಗ್ರರನ್ನು ಹೊಡೆದು ಉರುಳಿಸಿದರು.
ಈ ಘಟನೆಯಿಂದ ಉಭಯ ದೇಶಗಳ ಗಡಿಯಲ್ಲಿ ಯುದ್ಧ ಭೀತಿ ಉಂಟಾಗಿದ್ದು, ಈ ಹಿನ್ನಲೆಯಲ್ಲಿ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಾಂತಿ ಕಾಪಾಡುವಂತೆ ಎರಡು ದೇಶಗಳಲ್ಲಿ ಮನವಿ ಮಾಡಿದ್ದಾರೆ.
ಭಾರತ-ಪಾಕಿಸ್ತಾನ ನೆರೆ ರಾಷ್ಟ್ರಗಳಾಗಿದ್ದು, ಶಾಂತಿಯನ್ನು ಕಾಪಾಡಬೇಕು ಎಂದು ಟ್ವಿಟ್ಟರ್ ಮೂಲಕ ಶಾಹಿದ್ ಅಫ್ರಿದಿ ಮನವಿ ಮಾಡಿಕೊಂಡಿದ್ದಾರೆ.
ಉಭಯ ದೇಶಗಳು ಕಾದಾಡುವುದರಿಂದ ಎರಡೂ ದೇಶದ ಮೇಲೂ ಪರಿಣಾಮ ಬೀರಲಿದೆ. ಯುದ್ಧಕ್ಕೆ ಮುಂದಾಗಬೇಡಿ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.