ದೆಹಲಿ(ಅ.01): ಉರಿ ಸೇನಾ ಕೇಂದ್ರದ ಮೇಲೆ ಪಾಕಿಸ್ಥಾನ ಮೂಲದ ಭಯೋತ್ಪಾದಕರು ದಾಳಿ ನಡೆಸಿ, ಭಾರತೀಯ ಸೈನಿಕರ ಸಾವಿಗೆ ಕಾರಣರಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಪಾಕ್ ಗಡಿಯನ್ನು ದಾಟಿ 30ಕ್ಕೂ ಹೆಚ್ಚು ಉಗ್ರರನ್ನು ಹೊಡೆದು ಉರುಳಿಸಿದರು.
ಈ ಘಟನೆಯಿಂದ ಉಭಯ ದೇಶಗಳ ಗಡಿಯಲ್ಲಿ ಯುದ್ಧ ಭೀತಿ ಉಂಟಾಗಿದ್ದು, ಈ ಹಿನ್ನಲೆಯಲ್ಲಿ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಾಂತಿ ಕಾಪಾಡುವಂತೆ ಎರಡು ದೇಶಗಳಲ್ಲಿ ಮನವಿ ಮಾಡಿದ್ದಾರೆ.
ಭಾರತ-ಪಾಕಿಸ್ತಾನ ನೆರೆ ರಾಷ್ಟ್ರಗಳಾಗಿದ್ದು, ಶಾಂತಿಯನ್ನು ಕಾಪಾಡಬೇಕು ಎಂದು ಟ್ವಿಟ್ಟರ್ ಮೂಲಕ ಶಾಹಿದ್ ಅಫ್ರಿದಿ ಮನವಿ ಮಾಡಿಕೊಂಡಿದ್ದಾರೆ.
ಉಭಯ ದೇಶಗಳು ಕಾದಾಡುವುದರಿಂದ ಎರಡೂ ದೇಶದ ಮೇಲೂ ಪರಿಣಾಮ ಬೀರಲಿದೆ. ಯುದ್ಧಕ್ಕೆ ಮುಂದಾಗಬೇಡಿ ಎಂದಿದ್ದಾರೆ.
Relationship with all. When 2 neighbours fight both homes are effected. #sayno2war #pakistan #peace #india #neighbours
— Shahid Afridi (@SAfridiOfficial) September 29, 2016