
ಬೆಂಗಳೂರು [ಜು.20] : ರೆಸಾರ್ಟ್ ರಾಜಕೀಯ ಬಿಟ್ಟು ಶಹಾಪುರ ಕಾಂಗ್ರೆಸ್ ಶಾಸಕ ಶರಣಬಸಪ್ಪ ಗೌಡ ಹೊರ ಬಂದಿದ್ದಾರೆ.
ಕ್ಷೇತ್ರದ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಆಗಮಿಸಿದ್ದು, ಖಾಸಗಿ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದಾರೆ.
ಶನಿವಾರ ರಾತ್ರಿ ಕಲಬುರಗಿಯಿಂದ ಮತ್ತೆ ಬೆಂಗಳೂರಿಗೆ ತೆರಳಲಿರುವ ಶಾಸಕ ದರ್ಶನಾಪುರ, ವಿಶ್ವಾಸಮತ ಯಾಚನೆ ಹಿನ್ನೆಲೆ ಆಗಮಿಸುತ್ತಿದ್ದಾರೆ.
ಆದರೆ ಅತ್ತ ರೆಬೆಲ್ ಆದ ಶಾಸಕರ ಹೋಟೆಲ್ ವಾಸ ಮುಂದುವರಿದಿದೆ. ಅಸಮಾಧಾನಗೊಂಡು ಮುಂಬೈ ಸೇರಿದವರು ಮೈತ್ರಿ ಪಾಳಯ ಧಿಕ್ಕರಿಸಿದ್ದಾರೆ. ಆದರೆ ಇತ್ತ ಅವರ ಮನವೊಲಿಕೆ ಯತ್ನ ಮಾತ್ರ ನಿರಂತರವಾಗಿ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.