ಲಿಂಗಾಯತ ಪ್ರತ್ಯೇಕ ಧರ್ಮ: ರಾಜ್ಯ ಸರ್ಕಾರದ ನಡೆಗೆ ಶ್ಯಾಮನೂರು ಶಿವಶಂಕರಪ್ಪ ಸಡ್ಡು

Published : Mar 20, 2018, 03:20 PM ISTUpdated : Apr 11, 2018, 12:34 PM IST
ಲಿಂಗಾಯತ ಪ್ರತ್ಯೇಕ ಧರ್ಮ: ರಾಜ್ಯ ಸರ್ಕಾರದ ನಡೆಗೆ ಶ್ಯಾಮನೂರು ಶಿವಶಂಕರಪ್ಪ ಸಡ್ಡು

ಸಾರಾಂಶ

ಲಿಂಗಾಯತ ಪ್ರತ್ಯೇಕಧರ್ಮ ನಡೆಗೆ ರಾಜ್ಯ ಸರ್ಕಾರದ ವಿರುದ್ಧ ಶ್ಯಾಮನೂರು ಶಿವಶಂಕರಪ್ಪ ಸಡ್ಡು ಹೊಡೆದಿದ್ದಾರೆ. 

ಬೆಂಗಳೂರು (ಮಾ. 20): ಲಿಂಗಾಯತ ಪ್ರತ್ಯೇಕಧರ್ಮ ನಡೆಗೆ ರಾಜ್ಯ ಸರ್ಕಾರದ ವಿರುದ್ಧ ಶ್ಯಾಮನೂರು ಶಿವಶಂಕರಪ್ಪ ಸಡ್ಡು ಹೊಡೆದಿದ್ದಾರೆ. 

ವೀರಶೈವ ಲಿಂಗಾಯತ ಎಂದು ಧರ್ಮ ಮಾಡುವುದಿದ್ದರೆ ಒಪ್ಪುತ್ತಿದ್ದೆವು. ಮೊದಲು ವೀರಶೈವ ಇರಬೇಕಿತ್ತು ಎಂದು ಶ್ಯಾಮನೂರು ಶಿವಶಂಕರಪ್ಪ  ಮನೆಯಲ್ಲಿಯೇ ಸಭೆ ನಡೆಸಿ ಹೇಳಿದ್ದಾರೆ. ಸಭೆಯಲ್ಲಿ  ರಂಭಾಪುರಿ ಶ್ರೀ, ಉಜ್ಜಯನಿ ಶ್ರೀ ಸೇರಿ ಹಲವು ಸ್ವಾಮೀಜಿಗಳು ಉಪಸ್ಥಿತರಿದ್ದರು.  

ಈ ಸಂಬಂಧ ಚರ್ಚಿಸಲು ಬೆಂಗಳೂರಿನಲ್ಲಿ ಮಾರ್ಚ್ 23ರಂದು ಮಹಾಸಭಾ ನಿರ್ಣಾಯಕ ಸಭೆ ಕೈಗೊಳ್ಳಲಿದೆ. ರಾಜ್ಯ ಸರ್ಕಾರಕ್ಕೆ ನಾವು ಯಾವುದೇ ಪತ್ರವನ್ನು ಬರೆಯುವ ಪ್ರಶ್ನೆಯಿಲ್ಲ.  ವೀರಶೈವ ಸಮುದಾಯ ಬಸವತತ್ವವನ್ನು ಒಪ್ಪುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಗೆ ಶ್ಯಾಮನೂರು ಶಿವಶಂಕರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ