
ನವದೆಹಲಿ : ಅಗತ್ಯ ಬಿದ್ದರೆ, ದೇಶದ ರಕ್ಷಣೆಗಾಗಿ ಕೇವಲ ಮೂರೇ ದಿನಗಳಲ್ಲಿ ದಿನಗಳಲ್ಲಿ ಕಾರ್ಯಕರ್ತರನ್ನು ಸೇನೆಯಂತೆ ಸಜ್ಜುಗೊಳಿಸುವ ಸಾಮರ್ಥ್ಯ ಆರ್ಎಸ್ಎಸ್ಗೆ ಇದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಇಂತಹ ಹೇಳಿಕೆ ನೀಡುವ ನಿಮಗೆ ನಾಚಿಕೆಯಾಗುವುದಿಲ್ಲವೇ. ಈ ರೀತಿಯಾಗಿ ನೀವು ಮಾತನಾಡಿರುವುದು ಪ್ರತೀ ಭಾರತೀಯರಿಗೂ ಅವಮಾನ ಮಾಡಿದಂತೆ ಎಂದು ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಇದು ನಮ್ಮನ್ನು ಕಾಯುವ ಸೈನಿಕರಿಗೂ ಮಾಡಿರುವ ಅಪಮಾನ ಎಂದು ರಾಹುಲ್ ಹೇಳಿದ್ದಾರೆ.
ನಾವೆಲ್ಲರೂ ಎಂದಿಗೂ ಸೆಲ್ಯೂಟ್ ಮಾಡುವ ಹುತಾತ್ಮತ ಯೋಧರಿಗೆ ಆರ್’ಎಸ್ಎಸ್ ಮುಖಂಡ ಭಾಗವತ್ ಅವರ ಹೇಳಿಕೆ ಅಗೌರವವನ್ನು ಉಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.