
ಕೊಲ್ಲಾಪುರ[ಏ.14]: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ವಿರೋಧ ಹೊಂದಿದ್ದ ಮನೋಹರ್ ಪರ್ರಿಕರ್, ಇದೇ ಕಾರಣಕ್ಕಾಗಿ ರಕ್ಷಣಾ ಸಚಿವ ಹುದ್ದೆಗೆ ರಾಜೀನಾಮೆ ನೀಡಿ ಗೋವಾ ರಾಜಕೀಯಕ್ಕೆ ಮರಳಿದರು ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಹೇಳಿಕೆ ನೀಡಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ರಫೇಲ್ ಖರೀದಿ ಮಾಡಿಕೊಂಡ ರೀತಿಗೆ ಪರ್ರಿಕರ್ ವಿರೋಧ ಹೊಂದಿದ್ದರು. ಈ ಕಾರಣಕ್ಕಾಗಿಯೇ ಅವರು ಕೇಂದ್ರ ರಾಜಕಾರಣಕ್ಕೆ ವಿದಾಯ ಹೇಳಿ, ಗೋವಾಕ್ಕೆ ಬಂದು ಸಿಎಂ ಹುದ್ದೆ ವಹಿಸಿಕೊಂಡರು ಎಂದು ಹೇಳಿದ್ದಾರೆ.
ಸದ್ಯ ಪವಾರ್ ಈ ಆರೋಪ ಭಾರೀ ಸಂಚಲನ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.