ಶರದ್ ಪವಾರ್ ವೇತನ ಭತ್ಯೆ ತಡೆಹಿಡಿಯಲು ಸುಪ್ರೀಂ ಆದೇಶ..!

Published : Jun 07, 2018, 02:45 PM IST
ಶರದ್ ಪವಾರ್ ವೇತನ ಭತ್ಯೆ ತಡೆಹಿಡಿಯಲು ಸುಪ್ರೀಂ ಆದೇಶ..!

ಸಾರಾಂಶ

ಸುಪ್ರೀಂ ಕೋರ್ಟ್‌ನಲ್ಲಿ ಶರದ್ ಯಾದವ್‌ಗೆ ತೀವ್ರ ಹಿನ್ನಡೆ ಶರದ್ ವೇತನ ಮತ್ತು ಇತರ ಭತ್ಯೆಗೆ ಕೋಕ್ ನೀಡಿದ ಸರ್ವೋಚ್ಛ ನ್ಯಾಯಾಲಯ ವಿಮಾನ ಹಾಗೂ ರೈಲ್ವೆ ಟಿಕೆಟ್‌ಗೂ ಕತ್ತರಿ ಹಾಕಿದ ಸುಪ್ರೀಂ ಆದೇಶ ರಾಜ್ಯಸಭೆ ಸದಸ್ಯತ್ವ ಅನರ್ಹ ಅರ್ಜಿ ವಿಚಾರಣೆಗೆ ದೆಹಲಿ ಹೈಕೋರ್ಟ್‌ಗೆ ಸೂಚನೆ

ನವದೆಹಲಿ(ಜೂ.7): ಬಿಹಾರ ಜೆಡಿಯು ಮಾಜಿ ಮುಖಂಡ ಶರದ್ ಯಾದವ್ ಅವರ ವೇತನ ಭತ್ಯೆಯನ್ನು ತಡೆಹಿಡಿಯುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶರದ್ ಯಾದವ್ ಅವರಿಗೆ ಭಾರೀ ಮುಖಭಂಗವಾಗಿದೆ.

ಶರದ್ ಯಾದವ್ ಅವರಿಗೆ ವೇತನ, ಭತ್ಯೆ, ವಿಮಾನ ಹಾಗೂ ರೈಲ್ವೆ ಟಿಕೆಟ್ ಭತ್ಯೆ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಜೊತೆಗೆ ಜುಲೈ 12ರೊಳಗೆ ನವದೆಹಲಿಯಲ್ಲಿರುವ ತಮ್ಮ ಅಧಿಕೃತ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಲು ಸೂಚಿಸಿದೆ. 

ಇದೇ ವೇಳೆ ರಾಜ್ಯ ಸಭೆ ಸದಸ್ಯತ್ವನ್ನು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಶರದ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಂತೆ ದೆಹಲಿ ಹೈಕೋರ್ಟ್‌ ಗೆ ಸುಪ್ರೀಂಕೋರ್ಟ್ ಸೂಚನೆ ಕೂಡ ನೀಡಿದೆ.

ಅದರ್ಶ್ ಕುಮಾರ್ ಗೋಯೆಲ್ ಮತ್ತು ಅಶೋಕ್ ಭೂಷಣ್ ಅವರಿದ್ದ  ನ್ಯಾಯಪೀಠ ಈ ಆದೇಶ ಹೊರಡಿಸಿದ್ದು,ನವದೆಹಲಿಯಲ್ಲಿರುವ ತಮ್ಮ ಅಧಿಕೃತ ಸರ್ಕಾರಿ ಬಂಗಲೆಯಲ್ಲಿ ಶರದ್ ಯಾದವ್ ಮುಂದುವರಿಯುಂತೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜೆಡಿಯು ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌