ಮೋದಿ ಮುಸ್ಲಿಮರ ಟೋಪಿ ಧರಿಸಲ್ಲ ಎಂದ ತರೂರ್‌ಗೆ ಮಂಗಳಾರತಿ!

Published : Aug 06, 2018, 10:50 PM IST
ಮೋದಿ ಮುಸ್ಲಿಮರ ಟೋಪಿ ಧರಿಸಲ್ಲ ಎಂದ ತರೂರ್‌ಗೆ ಮಂಗಳಾರತಿ!

ಸಾರಾಂಶ

ಒಂದೆಲ್ಲಾ ಒಂದು ವಿವಾದವನ್ನು ಕಾರಣವಿಲ್ಲದೆ ಮೈಮೇಲೆ ಎಳೆದುಕೊಳ್ಳುವ ಕಾಂಗ್ರೆಸ್ ಮುಖಂಡ ಶಶಿ ತರೂರ್ ಈ ಬಾರಿ ಮೋದಿ ಕುರಿತು ಮಾತನಾಡಿದ್ದಾರೆ. ಮುಸ್ಲಿಮರ ಟೋಪಿ ವಿಚಾರದಲ್ಲಿ ಮೋದಿ ಬಗ್ಗೆ ಮಾತನಾಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಗೆ ಗುರಿಯಾಗಿದ್ದಾರೆ.

ನವದೆಹಲಿ[ ಆ. 6]  ಸ್ವಾಮಿ ವಿವೇಕಾನಂದರು ಈಗ ಇದ್ದಿದ್ದರೆ ಅವರ ಮೇಲೆಯೂ ದಾಳಿಯಾಗುತ್ತಿತ್ತು ಎಂದು ಹೇಳಿಕೆ ನೀಡಿ ಸೋಮವಾರ ಬೆಳಿಗ್ಗೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಎಲ್ಲ ವೇಷಭೂಷಣ ತೊಡುವ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರ ಟೋಪಿ ಯಾಕೆ ಧರಿಸುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕೇರಳದ ತಿರುವನಂತಪುರಂನಲ್ಲಿ ಉಪನ್ಯಾಸವೊಂದರಲ್ಲಿ ಅವರು ಮಾತನಾಡುತ್ತ, 'ಸಬ್‌ ಕಾ ಸಾಥ್, ಸಬ್‌ ಕಾ ವಿಕಾಸ್'  ಎಂದು ಮೋದಿ ಹೇಳುತ್ತಿದ್ದರೂ ಒಂದು ವರ್ಗವನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಹಿಂಸಾಚಾರಗಳು ಹೆಚ್ಚಿವೆ. ನಾಗರಿಕರು ಅಭದ್ರತೆಯ ಜೀವನ ನಡೆಸುವಂತಾಗಿದೆ ಎಂದು ಆರೋಪಿಸಿದರು. ಮೋದಿ ಮತ್ತು ಸಮುದಾಯವೊಂದಕ್ಕೆ ನೋವಾಗುವ ಹೇಳಿಕೆ ನೀಡಿರುವ ತರೂರ್ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಘ ಸಂಸ್ಕಾರದಿಂದಲೇ ರಾಜಕಾರಣವನ್ನು ಸಂಸ್ಕರಿಸಿದ ಅಟಲ್ ಜೀ: ಕಿರಣಕುಮಾರ ವಿವೇಕವಂಶಿ ಲೇಖನ!
ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್