
ನವದೆಹಲಿ : ಕಾಂಗ್ರೆಸ್ ಮುಖಂಡ ಶಶಿ ತರೂರ್ ದೇವಾಲಯದಲ್ಲಿ ಪೂಜೆ ಸಲ್ಲಿಸುವಾಗ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಿರುವನಂತಪುರದ ದೇವಾಲಯವೊಂದರಲ್ಲಿ ತುಲಾಭಾರ ಮಾಡಲಾಗಿತ್ತು. ಹಣ್ಣು ಮತ್ತು ಸಿಹಿಯಿಂದ ತುಲಾ ಭಾರ ಮಾಡಲಾಗುತಿತ್ತು.
ಈ ವೇಳೆ ತಕ್ಕಡಿಯ ಚೈನ್ ತುಂಡಾಗಿ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ತಿರುವನಂತಪುರದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಹೊಲಿಗೆ ಹಾಕಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ಹೇಳಿವೆ.
24 ಗಂಟೆಗಳ ಕಾಲ ಶಶಿ ತರೂರ್ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದ್ದು, ಕೊಂಚ ಚೇತರಿಸಿಕೊಂಡಿದ್ದಾರೆ.
ತಿರುವನಂತಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ಏಪ್ರಿಲ್ 23ರಂದು ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ದೇವಾಲಯಕ್ಕೆ ತೆರಳುವ ಮುನ್ನ ತರೂರ್ ಚುನಾವಣಾ ಪ್ರಚಾರ ನಡೆಸಿದ್ದರು. ಅಮ್ಮ ಹಾಗೂ ಸಹೋದರಿ ಚುನಾವಣಾ ಪ್ರಚಾರಕ್ಕೆ ಸಾಥ್ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.