
ತಿರುವನಂತಪುರಂ(ಜ.16): ಪ್ರಧಾನಿ ನರೇಂದ್ರ ಮೋದಿ ಕೇರಳದ ಪದ್ಮನಾಭ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾಗ, ನಮ್ಮನ್ನು ದೇವಾಲಯ ಪ್ರವೇಶಿಸಲು ಬಿಡಲಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.
ಪ್ರಧಾನಿ ಕಚೇರಿಯ ವಿರುದ್ಧ ಶಶಿ ತರೂರ್ ಟ್ವಿಟರ್ ಮೂಲಕ ಹರಿಹಾಯ್ದಿರುವ ತರೂರ್, ತಮ್ಮನ್ನು ಹಾಗೂ ತಮ್ಮ ಜೊತೆಗಿದ್ದ ಸ್ಥಳೀಯ ನಾಯಕರನ್ನು ಪದ್ಮನಾಭ ಸ್ವಾಮಿ ದೇವಾಲಯಕ್ಕೆ ಪ್ರವೇಶಿಸಲು ಬಿಡಲಿಲ್ಲ ಎಂದು ಕಿಡಿಕಾರಿದ್ದಾರೆ.
ಸ್ವದೇಶ್ ದರ್ಶನ್ ಯೋಜನೆ ಫಲಕವನ್ನು ಅನಾವರಣಗೊಳಿಸಲು ಪ್ರಧಾನಿ ಮೋದಿ ತಿರುವನಂತಪುರಂ ಪದ್ಮನಾಭ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರನ್ನು ಸ್ವಾಗತಿಸಿದ ಸ್ಥಳೀಯ ಸಂಸದ, ಶಾಸಕ, ಮೇಯರ್ ಮೋದಿ ಅವರೊಂದಿಗೇ ದೇವಾಲಯ ಪ್ರವೇಶಿಸುವವರಿದ್ದರು. ಆದರೆ ನಂತರದಲ್ಲಿ ನಮಗೆಲ್ಲರಿಗೂ ಅವಕಾಶ ನಿರಾಕರಿಸಲಾಯಿತು ಎಂದು ತರೂರ್ ಟ್ವೀಟ್ ಮಾಡಿದ್ದಾರೆ.
‘ಬಿಜೆಪಿ ಆಡಳಿತದಲ್ಲಿ ದೇವರೂ ಸಹ ರಾಜಕೀಯ ಉದ್ದೇಶಗಳನ್ನು ಈಡೇರಿಸಬೇಕು..’ ಎಂದು ವ್ಯಂಗ್ಯವಾಡಿರುವ ತರೂರ್, ಪ್ರಧಾನಿ ಸಮ್ಮುಖದಲ್ಲಿ ಬೇರೆ ಪಕ್ಷದ ಸದಸ್ಯರು ಪೂಜೆ ಸಲ್ಲಿಸುವುದಕ್ಕೆ ಅವಕಾಶವಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.