
ನವದೆಹಲಿ(ಜೂ.5): ಯುವಕರನ್ನು ದುಶ್ಚಟಗಳಿಂದ ಹೇಗೆ ಮುಕ್ತಿ ಮಾಡಬೇಕು ಎಂದು ಸರ್ಕಾರಗಳು ತಲೆ ಕೆಡಿಸಿಕೊಳ್ಳುತ್ತಿದ್ದರೆ, ಇತ್ತ ಕಾಂಗ್ರೆಸ್ ನಾಯಕ ಶಶಿ ತರೂರ್, ದೇಶದಲ್ಲಿ ಗಾಂಜಾ ಸೇವನೆಯನ್ನು ಕಾನೂನುಬದ್ದಗೊಳಿಸಬೇಕು ಎಂಬ ವಿಚಿತ್ರ ಬೇಡಿಕೆಯನ್ನು ಮಂಡಿಸಿದ್ದಾರೆ.
ದೇಶದಲ್ಲಿ ಗಾಂಜಾ ಸೇವನೆಯನ್ನು ಕಾನೂನುಬದ್ದಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿರುವ ತರೂರ್, ಇದರಿಂದ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗಲಿದೆ ಎಂಬ ವಿಚಿತ್ರ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ. ಗಾಂಜಾ ಸೇವನೆಯಿಂದ ಮಾನವೀಯ ಮೌಲ್ಯಗಳು ಹೆಚ್ಚುತ್ತವೆ ಎಂದು ಹೇಳಿರುವ ಅವರು, ಭ್ರಷ್ಟಾಚಾರ ನಿರ್ಮೂಲನೆಗೆ ಇದು ಸಹಾಯ ಮಾಡಲಿದೆ ಎಂದಿದ್ದಾರೆ.
ದೇಶದಲ್ಲಿ ಗಾಂಜಾ ಅಕ್ರಮವಾಗಿ ಮಾರಾಟವಾಗುತ್ತಿದ್ದು, ಇದರ ಸೇವನೆ ಮಾಡುವವರ ಸಂಖ್ಯೆಯೂ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಇದನ್ನು ಕಾನೂನುಬದ್ದಗೊಳಿಸುವುದರಿಂದ ಲಾಭವೇ ಹೆಚ್ಚು ಎಂದು ತರೂರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.