ಬೆಂಗಳೂರು ಜೈಲಿನಲ್ಲಿ ಕನ್ನಡ ಕಲಿಯುತ್ತಿದ್ದಾರೆ ಶಶಿಕಲಾ

Published : Jan 14, 2018, 11:55 AM ISTUpdated : Apr 11, 2018, 12:36 PM IST
ಬೆಂಗಳೂರು ಜೈಲಿನಲ್ಲಿ ಕನ್ನಡ ಕಲಿಯುತ್ತಿದ್ದಾರೆ ಶಶಿಕಲಾ

ಸಾರಾಂಶ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತಮಿಳುನಾಡಿನ ರಾಜಕೀಯ ನಾಯಕಿ ಶಶಿಕಲಾ ವಿ.ನಟರಾಜನ್ ಅವರು, ಈಗ ಕನ್ನಡ ಕಲಿಕೆ ಆರಂಭಿಸಿದ್ದಾರೆ ಎಂಬ ಕುತೂಹಲಕಾರಿ ಸಂಗತಿ ಬೆಳಕಿಗೆ ಬಂದಿದೆ.

ಬೆಂಗಳೂರು(ಜ.14): ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತಮಿಳುನಾಡಿನ ರಾಜಕೀಯ ನಾಯಕಿ ಶಶಿಕಲಾ ವಿ.ನಟರಾಜನ್ ಅವರು, ಈಗ ಕನ್ನಡ ಕಲಿಕೆ ಆರಂಭಿಸಿದ್ದಾರೆ ಎಂಬ ಕುತೂಹಲಕಾರಿ ಸಂಗತಿ ಬೆಳಕಿಗೆ ಬಂದಿದೆ.

ಕನ್ನಡ ಕಲಿಕೆಗೆ ಆಸಕ್ತಿ ವ್ಯಕ್ತಪಡಿಸಿದ ಶಶಿಕಲಾ ಅವರಿಗೆ ಕಾರಾಗೃಹ ಅಧಿಕಾರಿಗಳು ಪ್ರೋತ್ಸಾಹಿಸಿದ್ದು, ‘ಚಿನ್ನಮ್ಮ’ ಎಂದೇ ಜನಜನಿತವಾಗಿರುವ ಶಶಿಕಲಾಗೆ ಭಾಷೆ ಕಲಿಸಲು ಶಿಕ್ಷಕರನ್ನು ಸಹ ಅಧಿಕಾರಿಗಳು ನೇಮಿಸಿದ್ದಾರೆ. ಈ ಸಂಬಂಧ ‘ಕನ್ನಡಪ್ರಭ’ ಜತೆ ಮಾತನಾಡಿದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಜೆ.ಸೋಮಶೇಖರ್, ಮೂರು ದಿನಗಳ ಹಿಂದೆ ಕನ್ನಡ ಕಲಿಕೆಗೆ ಅವಕಾಶ ಕಲ್ಪಿಸುವಂತೆ ಶಶಿಕಲಾ ವಿನಂತಿಸಿದ್ದರು.

ಈ ಕೋರಿಕೆಗೆ ಹಿನ್ನೆಲೆಯಲ್ಲಿ ಕಾರಾಗೃಹದ ಶಿಕ್ಷಕರಿಂದ ಅವರಿಗೆ ಅಕ್ಷರಾಭ್ಯಾಸ ನಡೆದಿದೆ ಎಂದರು. ಈಗಷ್ಟೆ ಅವರು ಅಕ್ಷರ ಕಲಿಕೆ ಆರಂಭಿಸಿದ್ದಾರೆ. ಪ್ರತಿ ದಿನ ರಿಂದ 2ಗಂಟೆ ಶಶಿಕಲಾ ಅವರ ಸೆಲ್‌ನಲ್ಲೇ ಮಹಿಳಾ ಶಿಕ್ಷಕಿ ಅಕ್ಷರ ಹೇಳಿಕೊಡುತ್ತಿದ್ದಾರೆ.

 ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಓದುವ ಇಚ್ಛೆ ವ್ಯಕ್ತಪಡಿಸಿದರೆ ಶಶಿಕಲಾ ಅವರಿಗೆ ಪುಸಕ್ತಗಳನ್ನು ಪೂರೈಸಲಾಗುತ್ತದೆ. ಮೇರು ಸಾಹಿತಿಗಳ ಕೃತಿಗಳು ಕಾರಾಗೃಹದ ಗ್ರಂಥಾಲಯದಲ್ಲಿವೆ. ಕನ್ನಡ ಕಲಿಯುವ ಶಶಿಕಲಾ ಅವರ ಆಸಕ್ತಿ ಮೆಚ್ಚುವಂತಹದ್ದು ಎಂದು ಸೋಮಶೇಖರ್ ಹೇಳಿದರು. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ 4.5 ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ಅವರು, 2017ರ ಫೆಬ್ರವರಿ ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!
ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ