
ನವದೆಹಲಿ: ಎಐಎಡಿಎಂಕೆಯ ಪದಚ್ಯುತ ಸಂಸದೆ ಶಶಿಕಲಾ ಪುಷ್ಪಾ ಮತ್ತು ಅವರ ಸ್ನೇಹಿತ, ವಕೀಲ ಡಾ.ಬಿ.ರಾಮಸ್ವಾಮಿ ಅವರು ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸೋಮವಾರ ಇಲ್ಲಿನ ಐಷಾರಾಮಿ ಹೋಟೆಲ್ವೊಂದರಲ್ಲಿ ವಿವಾಹದ ನವ ಜೀವನಕ್ಕೆ ಕಾಲಿಟ್ಟಿದ್ದಾರೆ.
ಈ ಮೂಲಕ ರಾಮಸ್ವಾಮಿ ಮತ್ತು ಶಶಿಕಲಾ ಪುಷ್ಪಾ ಅವರು ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದಾರೆ. ಡಾ.ಬಿ.ರಾಮಸ್ವಾಮಿ ಅವರ ಮೊದಲನೇ ಪತ್ನಿಯಾದ ಸತ್ಯಪ್ರಿಯಾ(34) ಎಂಬುವರು ತಾವಿನ್ನೂ ಅಧಿಕೃತವಾಗಿ ವಿಚ್ಛೇದನ ಪಡೆದಿಲ್ಲ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಬಗ್ಗೆ ಕಳೆದ ಶುಕ್ರವಾರ ವಿಚಾರಣೆ ನಡೆಸಿದ್ದ ಮದುರೈನ ಕೌಟುಂಬಿಕ ನ್ಯಾಯಾಲಯ ಪದಚ್ಯುತ ಸಂಸದೆ ಶಶಿಕಲಾ ಪುಷ್ಪಾ ಅವರೊಂದಿಗಿನ ರಾಮಸ್ವಾಮಿ ಅವರ ವಿವಾಹದ ಮೇಲೆ ತಡೆ ಹೇರಿತ್ತು.
ಇದರ ಹೊರತಾಗಿಯೂ ನವ ದಂಪತಿ ದೆಹಲಿಯ ಲಲಿತ್ ಮಹಲ್ ಹೋಟೆಲ್ನಲ್ಲಿ ಸೋಮವಾರ ವಿವಾಹವಾಗುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ ಆರೋಪಕ್ಕೆ ತುತ್ತಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.