
ನವದೆಹಲಿ (ಜ.16): ಭಾರತದ ಲಾಂಛನ ಮತ್ತು ಚಿಹ್ನೆಗಳ ಜತೆ ಚೆಲ್ಲಾಟವಾಡುವುದನ್ನು ನಿಲ್ಲಿಸಿ ಎಂದು ಆನ್'ಲೈನ್ ಶಾಪಿಂಗ್ ತಾಣ ಅಮೆಜಾನ್ಗೆ ಆರ್ಥಿಕ ವ್ಯವಹಾರ ಸಚಿವಾಲಯದ ಕಾರ್ಯದರ್ಶಿ ಶಶಿಕಾಂತ್ ದಾಸ್ ಸೂಚಿಸಿದ್ದಾರೆ.
ನಿರ್ಲಕ್ಷ್ಯ ವಹಿಸಿದರೆ ಗಂಡಾಂತರವನ್ನು ನೀವೇ ಆಹ್ವಾನಿಸಿಕೊಂಡಂತೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಭಾರತದ ತ್ರಿವರ್ಣ ಧ್ವಜದ ಚಿತ್ರಣವಿರುವ ಕಾಲೊರೆಸು ಮಾರಾಟಕ್ಕಿಟ್ಟಿದ್ದ ಅಮೆಜಾನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ಅಮೆಜಾನ್, ಅದರ ಮಾರಾಟ ಸ್ಥಗಿತಗೊಳಿಸಿತ್ತು. ಜತೆಗೆ ಗಾಂಧೀಜಿ ಭಾವಚಿತ್ರವುಳ್ಳ ಚಪ್ಪಲಿ ಬಿಡುಗಡೆ ಮಾಡಿದ್ದು ಭಾರತೀಯರ ಕೆಂಗಣ್ಣಿಗೆ ಅಮೆಜಾನ್ ಗುರಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.