
ಪಾಟ್ನಾ : ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಅವರಿಗೆ ನೀಡಲಾಗಿದ್ದ ವಿಐಪಿ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಪಾಟ್ನಾ ಏರ್ ಪೋರ್ಟ್ ಅಧಿಕಾರಿಗಳು ಹೇಳಿದ್ದಾರೆ.
ಜಯಪ್ರಕಾಶ್ ನಾರಾಯಣ್ ವಿಮಾನ ನಿಲ್ದಾಣದ ನಿರ್ದೇಶಕರಾದ ರಾಜೇಂದ್ರ ಸಿಂಗ್ ಲಹೌರಿಯಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ವಾಪಸ್ ಪಡೆಯಲಾಗುತ್ತದೆ. ಅಲ್ಲದೇ ಬೋರ್ಡಿಂಗ್ ಪಾಸ್ ಗೆ ಸರತಿ ಸಾಲಿನಲ್ಲಿ ನಿಲ್ಲುವುದರಿಂದಲೂ ಅವರಿಗೆ ವಿನಾಯಿತಿ ಇರುವುದಿಲ್ಲ. ಅವರ ವಾಹನಕ್ಕೂ ಕೂಡ ಭದ್ರತಾ ತಪಾಸಣೆಯಿಂದ ವಿನಾಯಿತಿ ನೀಡಲಾಗುವುದಿಲ್ಲ.
ಜೂನ್ ತಿಂಗಳಲ್ಲಿಯೇ ಅವರಿಗೆ ನೀಡುತ್ತಿದ್ದ ಭದ್ರತಾ ಸ್ಥಾನಮಾನ ಅವಧಿ ಮುಕ್ತಾಯವಾಗಿದೆ. ವಿಐಪಿ ಸ್ಥಾನ ಮಾನ ಮುಂದುವರಿಸಲು ಯಾವುದೇ ಆದೇಶವೂ ಬಂದಿಲ್ಲ ಎಂದು ಲಹೌರಿಯಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.