2019ರ ಚುನಾವಣೆ ವೇಳೆಗೆ ಶತ್ರುಘ್ನ ಸಿನ್ಹಾ ಬಿಜೆಪಿಗೆ ಗುಡ್‌ಬೈ?

Published : Mar 30, 2018, 08:25 AM ISTUpdated : Apr 11, 2018, 01:08 PM IST
2019ರ ಚುನಾವಣೆ ವೇಳೆಗೆ ಶತ್ರುಘ್ನ ಸಿನ್ಹಾ ಬಿಜೆಪಿಗೆ ಗುಡ್‌ಬೈ?

ಸಾರಾಂಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ನೋಟು ಅಪನಗದೀಕರಣ ಮತ್ತು ಜಿಎಸ್‌ಟಿ ಕುರಿತು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ ಸಂಸದ ಶತ್ರುಘ್ನ ಸಿನ್ಹಾ ಅವರು ಬಿಜೆಪಿ ತೊರೆಯುವ ಸಾಧ್ಯತೆಯಿದೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ನೋಟು ಅಪನಗದೀಕರಣ ಮತ್ತು ಜಿಎಸ್‌ಟಿ ಕುರಿತು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ ಸಂಸದ ಶತ್ರುಘ್ನ ಸಿನ್ಹಾ ಅವರು ಬಿಜೆಪಿ ತೊರೆಯುವ ಸಾಧ್ಯತೆಯಿದೆ.

2019ರ ಲೋಕಸಭಾ ಚುನಾವಣೆಗೂ ಮುನ್ನವೇ ಅವರು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಅಥವಾ ಮುಂಬರುವ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ವರದಿಗಳು ತಿಳಿಸಿವೆ.

ಈ ಬಗ್ಗೆ ಗುರುವಾರ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ‘2014ರಲ್ಲಿ ಆಡಳಿತ ಹಿಡಿಯುವಲ್ಲಿ ಯಶಸ್ವಿಯಾದ ಬಿಜೆಪಿ ತಮ್ಮನ್ನು ನಡೆಸಿಕೊಂಡ ರೀತಿ ಮತ್ತು ಕೇವಲ 2 ಸೀಟು ಗೆಲ್ಲುವಷ್ಟುಸಾಮರ್ಥ್ಯವಿದ್ದ ಬಿಜೆಪಿ ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರ ನಾಯಕತ್ವದಲ್ಲಿ ಸುಮಾರು 200 ಸ್ಥಾನ ಗಳಿಸುವ ಸಾಮರ್ಥ್ಯ ಪಡೆಯಿತು.

ಅಂಥ ನಾಯಕನಿಗೆ ಇಂದು ಬಿಜೆಪಿಯಲ್ಲಿ ಇರುವ ಸ್ಥಾನಮಾನವಾದರೂ ಏನು?,’ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!