
ಚೆನ್ನೈ(ನ.19): ಸುಮಾರು 2 ತಿಂಗಳು ನಂತರ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಅಪೊಲೊ ಆಸ್ಪತ್ರೆಯ ತುರ್ತು ನಿಗಾ ಘಟಕದಿಂದ (ಐಸಿಯು) ವಿಶೇಷ ಕೊಠಡಿಗೆ ಶಿಫ್ಟ್ ಆಗಿದ್ದಾರೆ.
ಜಯಲಲಿತಾ ಅವರು ಅಪೊಲೊ ಆಸ್ಪತ್ರೆಯ ಐಸಿಯು ಘಟಕದಿಂದ ವಿಶೇಷ ಕೊಠಡಿಗೆ ಸ್ಥಳಾಂತರಗೊಂಡಿದ್ದಾರೆ'ಎಂದು ಎಡಿಎಂಕೆ ಪಕ್ಷದ ವಕ್ತಾರರಾದ ಸಿ.ಪೊನ್ನಿಯನ್ ತಿಳಿಸಿದ್ದಾರೆ. ನಿನ್ನೆಯಷ್ಟೆ ಅಪೊಲೊ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಪ್ರತಾಪ್ ರೆಡ್ಡಿ ಪತ್ರಿಕಾಗೋಷ್ಠಿ ನಡೆಸಿ ಜಯಲಲಿತಾ ಅವರಿಗೆ ವೆಂಟಿಲೇಟರ್ ತೆಗೆಯಲಾಗಿದ್ದು, ವೆಂಟಿಲೇಟರ್ ಇಲ್ಲದೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದಿನಕ್ಕೆ ಕೇವಲ 15 ನಿಮಿಷ ಮಾತ್ರ ವೆಂಟಿಲೇಟರ್ ಅಳವಡಿಸಲಾಗುತ್ತದೆ' ಎಂದು ತಿಳಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.