
ಬೆಂಗಳೂರು(ಜು.11): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ಗಾಂಧಿ ಚೀನಾ ರಾಯಭಾರಿ ಭೇಟಿ ಮಾಡಿದ್ದನ್ನು ಸಮರ್ಥಿಸಿ ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿದ್ದಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಬಲ ಎಂದು ಜರಿದಿದ್ದನ್ನು ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಿಲ್ಪಾ ಗಣೇಶ್ ಕಟುವಾಗಿ ಟೀಕಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿರುವ ಶಿಲ್ಪಾ, ರಾಹುಲ್ ಕೇವಲ ಸಂಸದರಷ್ಟೆ.ದೇಶದ ಯಾವುದೇ ಮುಖ್ಯ ಸಂಸ್ಥೆಗಳ ಮುಖ್ಯಸ್ಥರಲ್ಲ.ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚೀನಾವನ್ನು ಹಣಿಯಲು ಎಲ್ಲ.ಪ್ರಯತ್ನ ನಡೆಸುವಾಗಲೇ ರಾಹುಲ್ ಚೀನಾ ರಾಯಭಾರಿಯ ಭೇಟಿಯ ಹಿಂದಿನ ಕುತಂತ್ರವೇನು ಎಂದು ಪ್ರಶ್ನಿಸಿದ್ದಾರೆ. ಯಾವ ಮಾನದಂಡದ ಮೇಲೆ ರಾಹುಲ್ ರಾಯಭಾರಿಯನ್ನು ಭೇಟಿಯಾದರು? ಈ ಭೇಟಿಯಿಂದ ಏನನ್ನು ಸಾಧಿಸಲು ಹೊರಟಿದ್ದಾರೆ ಎಂದು ಅವರೇ ಹೇಳಬೇಕು ಎಂದು ಕುಟುಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.