
ಶಿವಮೊಗ್ಗ[ಜು.10] ಕಾಡಿನಂಚಿನ ತೋಟ , ಹೊಲ , ಗದ್ದೆಗೆ ದಾಳಿ ಇಡುವ ಹಂದಿ , ಮಂಗಗಳನ್ನ ಬೆದರಿಸಲು ಬೆದರು ಗೊಂಬೆ[ಬೆಚ್ಚು]ಗಳನ್ನು ಬಳಸುವುದನ್ನು ರೈತರು ಪಾರಂಪರಿಕವಾಗಿ ನಡೆಸಿಕೊಂಡು ಬಂದಿದ್ದಾರೆ. ಆಧುನಿಕತೆ ಎಷ್ಟೇ ಮುಂದುವರಿದಿದ್ದರೂ ಹೊಲ-ಗದ್ದೆಗಳಲ್ಲಿ ಈ ಬೆಚ್ಚಪ್ಪಗೆ ಒಂದು ಸ್ಥಾನ ಖಾಯಂ.
ಆದರೆ ಚಿತ್ರದಲ್ಲಿ ಕಾಣುತ್ತಿರುವ ಚೆಚ್ಚಪ್ಪನ ಕೈಯಲ್ಲಿ ಕಾಂಗ್ರೆಸ್ ಧ್ವಜವಿದೆ. ಚುನಾವಣೆ ಮುಗಿದ ಬಳಿಕ ಪಕ್ಷಗಳ ಧ್ವಜಗಳು ಹೇಗೆಲ್ಲಾ ಬಳಕೆಗೆ ಬರುತ್ತವೆ ಎಂಬುದು ಮಲೆನಾಡಿಗರನ್ನು ನೋಡಿ ಕಲಿಯಬೇಕು ಎಂದು ನೀವು ಭಾವಿಸಿದರೂ ತಪ್ಪಲ್ಲ. ಕಾಂಗ್ರೆಸ್ ಪಕ್ಷದ ಪಾರಮ್ಯ ಹೇಗಿದೆ ನೀವೇ ನೋಡಿ!
ಸಾಗರದ ಆನಂದಪುರಂ ಬಳಿಯ ಹಳ್ಳಿಗಳಾದ ಹೊಸಕೊಪ್ಪ , ಕಣ್ಣೂರು , ಗೌತಮಪುರ ಭಾಗದಲ್ಲಿನ ಬಗರ್ ಹುಕುಂ ಜಮೀನಿಗೆ ಈ ಧ್ವಜಗಳೇ ಕಾವಲು. ಯಾವ ಪ್ರಮಾಣದಲ್ಲಿ ಪ್ರಾಣಿಗಳ ಮೇಲೆ ಪ್ರಭಾವ ಬೀರುತ್ತದೆಯೋ ಗೊತ್ತಿಲ್ಲ. ಆದರೆ ನಿಜಕ್ಕೂ ಚುನಾವಣೆ ಮುಗಿದರೂ ಇಲ್ಲಿ ಪ್ರಚಾರ ನಡೆಯುತ್ತಲೇ ಇದೆ. ಜನರನ್ನು ಉದ್ದೇಶಿಸಿ ಮಾಡುತ್ತಿದ್ದ ಭಾಷಣವನ್ನು ಈಗ ಬೆಚ್ಚಪ್ಪ ಪ್ರಾಣಿಗಳನ್ನು ಉದ್ದೇಶಿಸಿ ಮಾಡುತ್ತಿರಬಹುದು!
ಮೈಕಲ್ ಜಾಕ್ಸನ್ ಹಾಡುಗಳನ್ನು ಹಾಕಿ ಪ್ರಾಣಿಗಳನ್ನು ಓಡಿಸಲಾಗುತ್ತಿತ್ತು ಎಂದು ಹಿಂದೆ ಕೇಳಿದ್ದೇವು. ಆದರೆ ಇದು ಅದೆಲ್ಲದಕ್ಕಿಂತ ಭಿನ್ನ. ಬೆಚ್ಚಪ್ಪನ ಕೈಗೆ ಕಾಂಗ್ರೆಸ್ ಧ್ವಜ ನೀಡಿ ಪ್ರಾಣಿಗಳಿಂದ ರಕ್ಷಣೆ ಪಡೆಯಬಹುದು ಎಂದು ತೋರಿಸಿಕೊಟ್ಟ ರೈತನ ಕ್ರಿಯಾಶೀಲತೆಗೆ ಸಲಾಂ ಹೇಳಲೇಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.