ಮಹಾ ಸರ್ಕಾರಕ್ಕೆ 500 ಕೋಟಿ ರೂ. ಸಾಲ ಕೊಟ್ಟ ಶಿರಡಿ ಟ್ರಸ್ಟ್!

Published : Dec 02, 2018, 02:04 PM ISTUpdated : Dec 02, 2018, 02:05 PM IST
ಮಹಾ ಸರ್ಕಾರಕ್ಕೆ 500 ಕೋಟಿ ರೂ. ಸಾಲ ಕೊಟ್ಟ ಶಿರಡಿ ಟ್ರಸ್ಟ್!

ಸಾರಾಂಶ

ಮಹಾರಾಷ್ಟ್ರ ಸರ್ಕಾರಕ್ಕೆ ಬಡ್ಡಿರಹಿತ ಸಾಲ ನೀಡಿದ  ಶಿರಡಿ ಸಾಯಿಬಾಬ ದೇವಾಲಯ ಟ್ರಸ್ಟ್ ! ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ 500 ಕೋಟಿ ರೂ. ಬಡ್ಡಿರಹಿತ ಸಾಲ! ಅಹ್ಮದ್ ನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗೆ ಸಾಲ! ನೀರಾವರಿ ಯೋಜನೆಗೆ ದೇವಾಲಯ ಬಡ್ಡಿರಹಿತ ಸಾಲ ನೀಡಲು ಒಪ್ಪಿಗೆ! 

ಮುಂಬೈ(ಡಿ.02): ಹಣಕಾಸು ಅವಶ್ಯಕತೆ ಹೊಂದಿರುವ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಶಿರಡಿ ಸಾಯಿಬಾಬ ದೇವಾಲಯ ಟ್ರಸ್ಟ್ ಬಡ್ಡಿ ರಹಿತವಾಗಿ 500 ಕೋಟಿ ರೂ. ಸಾಲ ನೀಡಿದೆ. 

ಅಹ್ಮದ್ ನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ನೀರಾವರಿ ಯೋಜನೆ ಪ್ರಾರಂಭವಾಗಿದ್ದು, ಯೋಜನೆ ಪೂರ್ಣಗೊಳ್ಳುವುದಕ್ಕೆ ಶಿರಡಿ ಸಾಯಿಬಾಬ ದೇವಾಲಯ ಟ್ರಸ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಸಾಲ ನೀಡಿದೆ. 

ಯೋಜನೆ ಪೂರ್ಣಗೊಳಿಸುವುದಕ್ಕಾಗಿ ಆರ್ಥಿಕ ಸಹಾಯ ಕೇಳಲು ಬಿಜೆಪಿ ನೇತೃತ್ವದ ಸರ್ಕಾರ ತೀರ್ಮಾನಿಸಿತ್ತು. ಇದರಂತೆ ಸರ್ಕಾರದ ಪ್ರತಿನಿಧಿಗಳು ಶಿರಡಿ ಟ್ರಸ್ಟ್  ಅಧ್ಯಕ್ಷರೂ ಆಗಿರುವ ಬಿಜೆಪಿ ನಾಯಕ ಸುರೇಶ್ ಹವಾರೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. 

ಈ ಹಿನ್ನೆಲೆಯಲ್ಲಿ ಶಿರಡಿ ಟ್ರಸ್ಟ್ ಸರ್ಕಾರಕ್ಕೆ 500 ಕೋಟಿ ರೂ. ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಇದೆ ಮೊದಲ ಬಾರಿಗೆ ಸರ್ಕಾರಿ ಸ್ವಾಮ್ಯದ ಯೋಜನೆಗೆ ಈ ಪ್ರಮಾಣದಲ್ಲಿ ಬಡ್ಡಿ ರಹಿತ ಸಾಲ ನೀಡಲಾಗಿದ್ದು, ಹಣವನ್ನು ಹಿಂತಿರುಗಿಸುವುದಕ್ಕೂ ಯಾವುದೇ ಗಡುವು ವಿಧಿಸಲಾಗಿಲ್ಲ. 

ಒಟ್ಟು 1,200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆಗೆ ದೇವಾಲಯ ಬಡ್ಡಿರಹಿತವಾಗಿ 500 ಕೋಟಿ ರೂ. ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ