
ಉಡುಪಿ: ಶಿರೂರು ಸ್ವಾಮೀಜಿ ನಿಧನಕ್ಕೆ ಸಂಬಂಧಪಟ್ಟು ಪೊಲೀಸರ ತನಿಖೆಗೆ ಹಲವು ಮಹತ್ವದ ಸಾಕ್ಷ್ಯಗಳನ್ನು ಒದಗಿಸಬಹುದಾಗಿದ್ದ ಶಿರೂರು ಮೂಲಮಠದ ಸಿ.ಸಿ.ಕ್ಯಾಮೆರಾ ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಅನ್ನು ಎಗರಿಸಿರುವ ಆರೋಪಿಗಳು ಅದನ್ನು ಸಮೀಪದ ಸುವರ್ಣ ನದಿಗೆ ಎಸೆದಿರುವುದು ಖಚಿತವಾಗಿದೆ. ಹೀಗಾಗಿ ಮಂಗಳವಾರ ಇಡೀದಿನ ದೋಣಿ ಬಳಸಿ ನದಿಯಲ್ಲಿ ಹುಡುಕಾಡಲಾಗಿದೆ. ಆದರೆ ಮಳೆಯಿಂದಾಗಿ ನದಿ ತುಂಬಿ ಹರಿಯುತ್ತಿ ರುವುದರಿಂದ ಪತ್ತೆಕಾರ್ಯ ಯಶಸ್ವಿಯಾಗಿಲ್ಲ ಎನ್ನಲಾಗಿದೆ.
ತನಿಖೆಗೆ 5 ತಂಡ : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ನಿಗೂಢ ಸಾವಿನ ತನಿಖೆಗೆ ೫ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ತನಿಖೆ ಒಂದು ಹಂತವನ್ನು ತಲುಪಿದೆ ಎಂದು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ತಿಳಿಸಿದ್ದಾರೆ. ಮಂಗಳವಾರ ಎಸ್ಪಿ ಲಕ್ಷ್ಮಣ ನಿಂಬರ್ಗಿ ಮತ್ತು ಇತರ ಅಧಿಕಾರಿಗಳೊಂದಿಗೆ ತನಿಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದವರು ಸ್ವಷ್ಟಪಡಿಸಿದರು. ಮಠದಲ್ಲಿರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳೂ ಸೇರಿ ಎಲ್ಲವೂ ತನಿಖೆ ಹಂತದಲ್ಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.